Cinema News
ಕನ್ನಡ ಮತ್ತು ತೆಲುಗಿನಲ್ಲಿ ತಯಾರಾಗುತ್ತಿದೆ ‘ಇಬ್ಬರ ನಡುವಿನ ಮುದ್ದಿನ ರಾಣಿ’

ಕೊರೋನ ಆರ್ಭಟದಿಂದ ಮಂಕಾಗಿದ್ದ ಕನ್ನಡ ಚಲನಚಿತ್ರರಂಗ ಈಗ ನಿಧಾನವಾಗಿ ಸುಧಾರಿಸಿಕೊಳ್ಳುತ್ತಿದೆ. ಸಾಕಷ್ಟು ನೂತನ ಚಿತ್ರಗಳು ಕೆಲವು ದಿನಗಳಿಂದ ಆರಂಭವಾಗುತ್ತಿದೆ. ಈ ಸಾಲಿಗೆ ಸೇರ್ಪಡೆಯಾಗಿರುವ ಮತ್ತೊಂದು ನೂತನ ಚಿತ್ರ ‘ಇಬ್ಬರ ನಡುವಿನ ಮುದ್ದಿನ ರಾಣಿ’. ಇತ್ತೀಚೆಗೆ ಈ ಚಿತ್ರದ ಮುಹೂರ್ತ ಸಮಾರಂಭ ದೊಡ್ಡಬಳ್ಳಾಪುರ ಬಳಿಯಿರುವ ಅಂಗಾಸನ ರೆಸಾರ್ಟ್ ನಲ್ಲಿ ನೆರವೇರಿತು. ಕನ್ನಡ ಹಾಗೂ ತೆಲುಗು ಭಾಷೆಗಳಲ್ಲಿ ಈ ಚಿತ್ರ ನಿರ್ಮಾಣವಾಗುತ್ತಿದೆ. ಚಿತ್ರದ ಮೊದಲ ಸನ್ನಿವೇಶಕ್ಕೆ ysrcp state joint Secretary ಕರ್ಮೂರು ವೆಂಕಟ ರೆಡ್ಡಿ ಆರಂಭ ಫಲಕ ತೋರುವ ಮೂಲಕ ಚಾಲನೆ ನೀಡಿದರು.
ಸೂರಜ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಸೌರಭ್ ಕಿಶೋರ್ ಈ ಚಿತ್ರ ನಿರ್ಮಿಸುತ್ತಿದ್ದಾರೆ. ಪಿ.ಎಂ.ಆರ್ ಕೋಣ್ಣಾರೆಡ್ಡಿ ಈ ಚಿತ್ರದ ಸಹ ನಿರ್ಮಾಪಕರು. ವಿಜಯ್ ಕುಮಾರ್ ಹಾಗೂ ಮಧುಬಾಬು ಅವರು ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ರೊಮ್ಯಾಂಟಿಕ್ ಲವ್ ಸ್ಟೋರಿ ಆಧಾರಿತ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಎಂ.ಎಸ್.ಎನ್ ರಾಜಾ ನಿರ್ದೇಶಿಸುತ್ತಿದ್ದಾರೆ. ಕಥೆ, ಚಿತ್ರಕಥೆ, ಸಂಭಾಷಣೆಯನ್ನು ನಿರ್ದೇಶಕರೇ ಬರೆದಿದ್ದಾರೆ. ಬೆಂಗಳೂರು, ದೊಡ್ಡಬಳ್ಳಾಪುರ, ಮಡಿಕೇರಿ ಮುಂತಾದ ಕಡೆ ೧೫ ದಿನಗಳ ಕಾಲ ಒಂದೇ ಹಂತದ ಚಿತ್ರೀಕರಣ ನಡೆಯಲಿದೆ.
ನಾಲ್ಕು ಹಾಡುಗಳಿರುವ ಈ ಚಿತ್ರಕ್ಕೆ ಎಂ.ಎಂ.ಮೋಹನ್ ಸಂಗೀತ ನೀಡುತ್ತಿದ್ದಾರೆ. ಬಾಲು ಸುರೇಶ್ ಛಾಯಾಗ್ರಹಣ, ಸತ್ಯಬಾಬು ಸಂಕಲನ ಹಾಗೂ ಭೂಪತಿ ಯಾದಗಿರಿ ಅವರ ಕಲಾ ನಿರ್ದೇಶನ ಈ ಚಿತ್ರಕ್ಕಿದೆ.
ನಿರ್ಮಾಪಕ ಸೌರಭ್ ಕಿಶೋರ್ ಅವರು ನಾಯಕರಾಗಿ ನಟಿಸುತ್ತಿರುವ ಈ ಚಿತ್ರದ ತಾರಾಬಳಗದಲ್ಲಿ ಆಕಾಶ್ ಆರಾಧ್ಯ, ದಿವ್ಯ ರಾವ್, ರೂಪ ರಾಯಪ್ಪ, ಸಂಜನ ನಾಯ್ಡು, ಮಹೇಂದರ್, ವಿಕ್ಚರಿ ವಾಸು, ಶೇಷಗಿರಿ, ಅಂಜಲಿ, ಲೋರ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
Cinema News
ಅಣ್ಣಾವ್ರ ಕುಟುಂಬದ ಕ್ಯಾಲೆಂಡರ್ ಬಿಡುಗಡೆ ಮಾಡಿದ್ದು ಸೌಭಾಗ್ಯ – ದೇವರಾಜ್

Cinema News
ಕಿಚ್ಚ ಸುದೀಪ್ ಅಭಿಮಾನಿ ಜಗ್ಗಿ ಈಗ ನಿರ್ಮಾಪಕ.

Cinema News
ಫೆ. 5ರಂದು ತೆರೆಗೆ ಬರಲಿದೆ ವಿನೋದ್ ಪ್ರಭಾಕರ್ “ಶ್ಯಾಡೊ”

Cinema News
ಫ್ಯಾಮಿಲಿ ಪ್ಯಾಕ್ ಸೆಟ್ನಲ್ಲಿ ಪವರ್

Cinema News
ಸ್ಯಾಂಡಲ್ವುಡ್ ಗೆ ಹೊಸ ರಾಮಾಚಾರಿ ಎಂಟ್ರಿ

-
Box Office1 year ago
ಮೂರು ದಿನಕ್ಕೆ “ಅವನೇ ಶ್ರೀಮನ್ನಾರಾಯಣ” ಗಳಿಸಿದ್ದು ಎಷ್ಟು ಕೋಟಿ?
-
Movie Reviews2 years ago
ರಾಮ್ ಜಾನುವಿನ ಮಧುರವಾದ ನೆನಪಿನ ಲವ್ಸ್ಟೋರಿ
-
Movie Reviews2 years ago
ಪಾರ್ವತಮ್ಮನ ಮಗಳಿಗೆ ಎಲ್ಲವೂ ಸಲೀಸು – ವಿಮರ್ಶೆ – ರೇಟಿಂಗ್ 3.5/5
-
Box Office2 years ago
ಸ್ಯಾಂಡಲ್ ವುಡ್ ನಲ್ಲಿ ಸೋತ ಅಮ್ಮ – ಮಗ
-
Cinema News1 year ago
ಫಿಕ್ಸ್ ಆಯ್ತು ‘ಪೈಲ್ವಾನ್’ ಟ್ರೇಲರ್ ಬಿಡುಗಡೆ ದಿನಾಂಕ!
-
Cinema News2 years ago
ಬಜಾರ್ ಧನ್ವೀರ್ಗೆ ಕಥೆ ಬರೆದ ಬಹದ್ದೂರ್ ಚೇತನ್
-
News2 years ago
‘ಗಟ್ಟಿಮೇಳ’ದ ಕ್ರಾಂತಿಯನ್ನು ನೇರವಾಗಿ ತರಲಿದೆ ”ಜೀ ಕನ್ನಡ”
-
Reviews2 years ago
ದೆವ್ವಕ್ಕೂ ‘ಗಿಮಿಕ್’ ಮಾಡಿದ ಗಣೇಶ್ – ‘ಗಿಮಿಕ್’ ಟ್ರೇಲರ್ ವಿಮರ್ಶೆ
-
News2 years ago
‘ನಾಯಕಿ’ಗೆ ಪ್ರಚಾರಕಿಯಾದ ನಟಿ ಹರಿಪ್ರಿಯಾ
-
Cinema News2 years ago
‘ಸಲಗ’ಕ್ಕೆ ದುನಿಯಾ ವಿಜಯ್ ನಿರ್ದೇಶಕ – Exclusive