Connect with us

Cinema News

ಕಪಿಲ್ ಅವರ “ಅತ್ಯುತ್ತಮ” ಚಿತ್ರಕ್ಕೆ ಚಾಲನೆ

Published

on

ಕರೋನಾದಿಂದ ಕಳೆಗುಂದಿದ್ದ ಕನ್ನಡ ಚಿತ್ರರಂಗದಲ್ಲಿ ವಿಜಯದಶಮಿಯ ಶುಭದಿನದಂದು ಒಂದಷ್ಟು ಹೊಸ ಚಿತ್ರಗಳು ಪ್ರಾರಂಭವಾಗುವ ಮೊದಲಿನ ರಾಜಕಳೆಗೆ ಮರಳಿದೆ. ಅದರಲ್ಲಿ ಅತ್ಯುತ್ತಮ ಎನ್ನುವ ಚಿತ್ರವೂ ಒಂದು.

 

ಪ್ರಥಮ, ಉತ್ತಮ, ಜೀವನಧಾಮ ಎಂಬ ಟ್ಯಾಗ್‍ಲೈನ್ ಹೊಂದಿರೋ ಈ ಚಿತ್ರದ ಮುಹೂತ್ ಸಮಾರಂಭ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿತು. ಸಾಹಿತಿ ದೊಡ್ಡರಂಗೇಗೌಡ ಸೇರಿದಂತೆ ಹಲವಾರು ಗಣ್ಯರು ಈ ಕಾರ್ಯಕ್ರಮದಲ್ಲಿ ಹಾಜರಿದ್ದು ಶುಭ ಹಾರೈಸಿದರು.

ಚಿತ್ರರಂಗದಲ್ಲಿ ಕಳೆದ 2 ದಶಕಗಳಿಂದ ನೂರಕ್ಕೂ ಹೆಚ್ಚು ಚಲನ ಚಿತ್ರಗಳಿಗೆ ಕೊರಿಯಾಗ್ರಾಫರ್ ಆಗಿ ಕೆಲಸ ಮಾಡುವ ಮೂಲಕ ಗುರ್ತಿಸಿಕೊಂಡಿದ್ದ ಎಂ.ಆರ್.ಕಪಿಲ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಐದನೇ ಚಿತ್ರ ಇದಾಗಿದೆ.

 

ಕಪಿಲ್ ಈ ಹಿಂದೆ ಹಳ್ಳಿಸೊಗಡು, ಹಸಿವು ಮತ್ತು ಅರಿವು ಸೇರಿದಂತೆ ನಾಲ್ಕು ಚಿತ್ರಗಳನ್ನು ನಿರ್ದೇಶಿಸಿದ್ದರು. ಬಿಎಂಎಸ್ ಸಿನಿ ಕ್ರಿಯೇಶನ್ಸ್ ಮೂಲಕ ಈ ಚಿತ್ರವನ್ನು ಸುನಿತಾ ಎಸ್.ಜೇವರಗಿ, ಪುಷ್ಪಲತಾ ಕುಡ್ಲೂರು ಹಾಗೂ ವೀಣಾ ಶ್ರೀನಿವಾಸ್ ಸೇರಿ ನಿರ್ಮಾಣ ಮಾಡುತ್ತಿದ್ದಾರೆ. ಇನ್ನು ಚಿತ್ರಕ್ಕೆ ಶಿವಕುಮಾರ್ ಜೇವರ್ಗಿ ಅವರು ಚಿತ್ರಕಥೆ, ಸಾಹಿತ್ಯ ಮತ್ತು ಸಂಭಾಷಣೆಗಳನ್ನು ಬರೆದಿದ್ದಾರೆ.

 

ಮುಹೂರ್ತದ ನಂತರ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ನಿರ್ದೇಶಕ ಕಪಿಲ್ ನಾನು ಲಾಕ್‍ಡೌನ್ ಟೈಂನಲ್ಲಿ ಇಪ್ಪತ್ಮೂರು ಕಥೆಗಳನ್ನು ರೆಡಿ ಮಾಡಿಕೊಂಡಿದ್ದೆ. ಅದರಲ್ಲಿ ಈ ಕಥೆಯೂ ಒಂದು. ಈಗಿನ ಡಿಜಿಟಲ್ ಯುಗದಲ್ಲಿ ಗಂಡ ಹೆಂಡತಿ ನಡುವಿನ ಸಂಬಂದ ಯಾವ ರೀತಿ ಇರುತ್ತದೆ, ಅವರ ನಡುವೆ ಭಿನ್ನಾಭಿಪ್ರಾಯ ಬಂದಾಗ ಮಕ್ಕಳು ಏನೆಲ್ಲ ಪ್ರಾಬ್ಲಂ ಎದುರಿಸಬೇಕಾಗುತ್ತದೆ, ಅದರಿಂದ ಮುಂದೆ ಉಂಟಾಗುವ ಪರಿಣಾಮಗಳೇನು ಎಂಬುದನ್ನು ಈ ಚಿತ್ರದ ಮೂಲಕ ಹೇಳುವ ಪ್ರಯತ್ನ ಮಾಡಲಾಗುತ್ತಿದೆ. ಬೆಂಗಳೂರು ಸುತ್ತಮುತ್ತ ಸುಮಾರು 30 ದಿನಗಳ ಕಾಲ ಈ ಚಿತ್ರಕ್ಕೆ ಶೂಟಿಂಗ್ ನಡೆಸುವ ಯೋಜನೆಯಿದೆ ಎಂದು ಹೇಳಿದರು.

 

ಚಿತ್ರಕಥೆ ಸಾಹಿತ್ಯ ರಚಿಸುವುದರೊಂದಿಗೆ ಈ ಚಿತ್ರದಲ್ಲಿ ನಾಯಕನ ಪಾತ್ರವನ್ನೂ ಸಹ ನಿರ್ವಹಿಸಿರುವ ಶಿವಕುಮಾರ ಜೇವರಗಿ ಅವರು ಮಾತನಾಡುತ್ತ ಇದೊಂದು ಫ್ಯಾಮಿಲಿಯಲ್ಲಿ ನಡೆಯುವ ಕಥೆ. ಸುಂದರವಾಗಿ ಸಾಗುತ್ತಿರುವ ಸಂಸಾರದಲ್ಲಿ ಪತಿ, ಪತ್ನಿಯ ನಡುವೆ ಇಗೋ ಅನ್ನುವುದು ಎಂದಿಗೂ ಇರಬಾರದು, ಅದು ಬಂದಾಗ ಹೇಗೆ ಮನಸ್ತಾಪಕ್ಕೆ ಕಾರಣವಾಗುತ್ತದೆ, ಆ ಭಿನ್ನಾಭಿಪ್ರಾಯದಿಂದಾಗಿ ಸಂಸಾರ ಯಾವರೀತಿ ಛಿದ್ರವಾಗುತ್ತದೆ, ಅಂತಹ ಪರಿಸ್ಥಿತಿ ಮಕ್ಕಳ ಮನಸ್ಸನ್ನು ಯಾವರೀತಿ ಘಾಸಿಗೊಳಿಸುತ್ತದೆ.

 

ಅದರಿಂದುಂಟಾಗುವ ದುಷ್ಪರಿಣಾಮಗಳನ್ನು ಅತ್ಯುತ್ತಮ ಎನ್ನುವ ಈ ಚಿತ್ರದ ಮೂಲಕ ಹೇಳುತ್ತಿದ್ದೇವೆ, ಈ ಚಿತ್ರದಲ್ಲಿ ನನ್ನದು ಸಂಸಾರದ ಹಿರಿಯನ ಪಾತ್ರ. ನಾನು ಮೂಲತ: ರಂಗಭೂಮಿ ಕಲಾವಿದನಾಗಿದ್ದು, ಹಲವಾರು ವರ್ಷಗಳಿಂದ ಚಿತ್ರರಂಗದಲ್ಲಿ ತೊಡಗಿಕೊಳ್ಳಬೇಕೆಂದು ಪ್ರಯತ್ನಿಸುತ್ತಿದ್ದೆ.

 

ಎಸ್‍ಕೆ. ಭಗವಾನ್, ತಿಪಟೂರು ರಘು ಅಂಥವರ ಬಳಿ ನಟನೆಯ ಪಾಠ ಕಲಿತಿದ್ದೇನೆ. ಚಲಿಸುವ ಮೋಡಗಳು ಚಿತ್ರದಲ್ಲಿ ಪುನೀತ್ ಅವರು ಮಾಡಿದ ಪಾತ್ರ ನೋಡಿದ ಮೇಲೆ ನಾನೂ ಚಿತ್ರರಂಗದಲ್ಲಿ ಏಕೆ ಪ್ರಯತ್ನಿಸಬಾರದು ಎನ್ನುವ ಆಸೆ ಮೂಡಿತ್ತು. ಇದೀಗ ಕೈಗೂಡಿದೆ. ಇಡೀ ಕುಟುಂಬ ಮುಜುಗರವಿಲ್ಲದೆ ಕುಳಿತು ನೋಡಬಹುದಾದ ಚಿತ್ರವನ್ನು ನಾವೆಲ್ಲ ಸೇರಿ ಮಾಡುತ್ತಿದ್ದೇವೆ ಎಂದು ಹೇಳಿದರು.

 

ಈ ಚಿತ್ರದ ಮತ್ತೊಂದು ಪ್ರಮುಖ ಪಾತ್ರವನ್ನು ಶಿವಪ್ಪ ಕುಡ್ಲೂರು ನಿರ್ವಹಿಸುತ್ತಿದ್ದಾರೆ, ತಮ್ಮ ಪಾತ್ರದ ಕುರಿತಂತೆ ಮಾತನಾಡಿದ ಅವರು ಚಿತ್ರದಲ್ಲಿ ನಾನು ಲಾಯರ್ ಪಾತ್ರ ಮಾಡುತ್ತಿದ್ದೇನೆ. ಈ ದಂಪತಿಗಳಲ್ಲಿ ಭಿನ್ನಾಭಿಪ್ರಾಯ ಬಂದಾಗ ಅದನ್ನು ಹೇಗೆ ನಿಭಯಿಸುತ್ತೇನೆ ಎಂದು ನನ್ನ ಪಾತ್ರದ ಮೂಲಕ ಹೇಳಲಾಗಿದೆ ಎಂದು ತಿಳಿಸಿದರು, ಇನ್ನು ಮಕ್ಕಳ ಪಾತ್ರ ನಿರ್ವಹಿಸಿರುವ ಮನೋಜ್ಞ ಕುಡ್ಲುರು ಹಾಗೂ ವಿನಯ್ ಹಾಸನ ತಮ್ಮ ಪಾತ್ರಗಳ ಕುರಿತು ಮಾಹಿತಿ ಹಂಚಿಕೊಂಡರು.

 

ಶಿವಣ್ಣ ಅವರ ಸ್ನೇಹಿತರೂ ಆದ ಬಿಜಾಪುರ ಮೂಲದ ಸಿದ್ದು ಸಾಹುಕಾರ ಅವರು ಈ ಚಿತ್ರತಂಡಕ್ಕೆ ಬೆನ್ನೆಲುಬಾಗಿ ನಿಂತಿದ್ದಾರೆ. ಈ ಚಿತ್ರದಲ್ಲಿ 4 ಹಾಡುಗಳಿದ್ದು, ದಿನೆಶ್ ಈಶ್ವರ್ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ, ಸಿ.ನಾರಾಯಣ್ ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ,

Spread the love

ಕರೋನಾದಿಂದ ಕಳೆಗುಂದಿದ್ದ ಕನ್ನಡ ಚಿತ್ರರಂಗದಲ್ಲಿ ವಿಜಯದಶಮಿಯ ಶುಭದಿನದಂದು ಒಂದಷ್ಟು ಹೊಸ ಚಿತ್ರಗಳು ಪ್ರಾರಂಭವಾಗುವ ಮೊದಲಿನ ರಾಜಕಳೆಗೆ ಮರಳಿದೆ. ಅದರಲ್ಲಿ ಅತ್ಯುತ್ತಮ ಎನ್ನುವ ಚಿತ್ರವೂ ಒಂದು.

 

ಪ್ರಥಮ, ಉತ್ತಮ, ಜೀವನಧಾಮ ಎಂಬ ಟ್ಯಾಗ್‍ಲೈನ್ ಹೊಂದಿರೋ ಈ ಚಿತ್ರದ ಮುಹೂತ್ ಸಮಾರಂಭ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿತು. ಸಾಹಿತಿ ದೊಡ್ಡರಂಗೇಗೌಡ ಸೇರಿದಂತೆ ಹಲವಾರು ಗಣ್ಯರು ಈ ಕಾರ್ಯಕ್ರಮದಲ್ಲಿ ಹಾಜರಿದ್ದು ಶುಭ ಹಾರೈಸಿದರು.

ಚಿತ್ರರಂಗದಲ್ಲಿ ಕಳೆದ 2 ದಶಕಗಳಿಂದ ನೂರಕ್ಕೂ ಹೆಚ್ಚು ಚಲನ ಚಿತ್ರಗಳಿಗೆ ಕೊರಿಯಾಗ್ರಾಫರ್ ಆಗಿ ಕೆಲಸ ಮಾಡುವ ಮೂಲಕ ಗುರ್ತಿಸಿಕೊಂಡಿದ್ದ ಎಂ.ಆರ್.ಕಪಿಲ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಐದನೇ ಚಿತ್ರ ಇದಾಗಿದೆ.

 

ಕಪಿಲ್ ಈ ಹಿಂದೆ ಹಳ್ಳಿಸೊಗಡು, ಹಸಿವು ಮತ್ತು ಅರಿವು ಸೇರಿದಂತೆ ನಾಲ್ಕು ಚಿತ್ರಗಳನ್ನು ನಿರ್ದೇಶಿಸಿದ್ದರು. ಬಿಎಂಎಸ್ ಸಿನಿ ಕ್ರಿಯೇಶನ್ಸ್ ಮೂಲಕ ಈ ಚಿತ್ರವನ್ನು ಸುನಿತಾ ಎಸ್.ಜೇವರಗಿ, ಪುಷ್ಪಲತಾ ಕುಡ್ಲೂರು ಹಾಗೂ ವೀಣಾ ಶ್ರೀನಿವಾಸ್ ಸೇರಿ ನಿರ್ಮಾಣ ಮಾಡುತ್ತಿದ್ದಾರೆ. ಇನ್ನು ಚಿತ್ರಕ್ಕೆ ಶಿವಕುಮಾರ್ ಜೇವರ್ಗಿ ಅವರು ಚಿತ್ರಕಥೆ, ಸಾಹಿತ್ಯ ಮತ್ತು ಸಂಭಾಷಣೆಗಳನ್ನು ಬರೆದಿದ್ದಾರೆ.

 

ಮುಹೂರ್ತದ ನಂತರ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ನಿರ್ದೇಶಕ ಕಪಿಲ್ ನಾನು ಲಾಕ್‍ಡೌನ್ ಟೈಂನಲ್ಲಿ ಇಪ್ಪತ್ಮೂರು ಕಥೆಗಳನ್ನು ರೆಡಿ ಮಾಡಿಕೊಂಡಿದ್ದೆ. ಅದರಲ್ಲಿ ಈ ಕಥೆಯೂ ಒಂದು. ಈಗಿನ ಡಿಜಿಟಲ್ ಯುಗದಲ್ಲಿ ಗಂಡ ಹೆಂಡತಿ ನಡುವಿನ ಸಂಬಂದ ಯಾವ ರೀತಿ ಇರುತ್ತದೆ, ಅವರ ನಡುವೆ ಭಿನ್ನಾಭಿಪ್ರಾಯ ಬಂದಾಗ ಮಕ್ಕಳು ಏನೆಲ್ಲ ಪ್ರಾಬ್ಲಂ ಎದುರಿಸಬೇಕಾಗುತ್ತದೆ, ಅದರಿಂದ ಮುಂದೆ ಉಂಟಾಗುವ ಪರಿಣಾಮಗಳೇನು ಎಂಬುದನ್ನು ಈ ಚಿತ್ರದ ಮೂಲಕ ಹೇಳುವ ಪ್ರಯತ್ನ ಮಾಡಲಾಗುತ್ತಿದೆ. ಬೆಂಗಳೂರು ಸುತ್ತಮುತ್ತ ಸುಮಾರು 30 ದಿನಗಳ ಕಾಲ ಈ ಚಿತ್ರಕ್ಕೆ ಶೂಟಿಂಗ್ ನಡೆಸುವ ಯೋಜನೆಯಿದೆ ಎಂದು ಹೇಳಿದರು.

 

ಚಿತ್ರಕಥೆ ಸಾಹಿತ್ಯ ರಚಿಸುವುದರೊಂದಿಗೆ ಈ ಚಿತ್ರದಲ್ಲಿ ನಾಯಕನ ಪಾತ್ರವನ್ನೂ ಸಹ ನಿರ್ವಹಿಸಿರುವ ಶಿವಕುಮಾರ ಜೇವರಗಿ ಅವರು ಮಾತನಾಡುತ್ತ ಇದೊಂದು ಫ್ಯಾಮಿಲಿಯಲ್ಲಿ ನಡೆಯುವ ಕಥೆ. ಸುಂದರವಾಗಿ ಸಾಗುತ್ತಿರುವ ಸಂಸಾರದಲ್ಲಿ ಪತಿ, ಪತ್ನಿಯ ನಡುವೆ ಇಗೋ ಅನ್ನುವುದು ಎಂದಿಗೂ ಇರಬಾರದು, ಅದು ಬಂದಾಗ ಹೇಗೆ ಮನಸ್ತಾಪಕ್ಕೆ ಕಾರಣವಾಗುತ್ತದೆ, ಆ ಭಿನ್ನಾಭಿಪ್ರಾಯದಿಂದಾಗಿ ಸಂಸಾರ ಯಾವರೀತಿ ಛಿದ್ರವಾಗುತ್ತದೆ, ಅಂತಹ ಪರಿಸ್ಥಿತಿ ಮಕ್ಕಳ ಮನಸ್ಸನ್ನು ಯಾವರೀತಿ ಘಾಸಿಗೊಳಿಸುತ್ತದೆ.

 

ಅದರಿಂದುಂಟಾಗುವ ದುಷ್ಪರಿಣಾಮಗಳನ್ನು ಅತ್ಯುತ್ತಮ ಎನ್ನುವ ಈ ಚಿತ್ರದ ಮೂಲಕ ಹೇಳುತ್ತಿದ್ದೇವೆ, ಈ ಚಿತ್ರದಲ್ಲಿ ನನ್ನದು ಸಂಸಾರದ ಹಿರಿಯನ ಪಾತ್ರ. ನಾನು ಮೂಲತ: ರಂಗಭೂಮಿ ಕಲಾವಿದನಾಗಿದ್ದು, ಹಲವಾರು ವರ್ಷಗಳಿಂದ ಚಿತ್ರರಂಗದಲ್ಲಿ ತೊಡಗಿಕೊಳ್ಳಬೇಕೆಂದು ಪ್ರಯತ್ನಿಸುತ್ತಿದ್ದೆ.

 

ಎಸ್‍ಕೆ. ಭಗವಾನ್, ತಿಪಟೂರು ರಘು ಅಂಥವರ ಬಳಿ ನಟನೆಯ ಪಾಠ ಕಲಿತಿದ್ದೇನೆ. ಚಲಿಸುವ ಮೋಡಗಳು ಚಿತ್ರದಲ್ಲಿ ಪುನೀತ್ ಅವರು ಮಾಡಿದ ಪಾತ್ರ ನೋಡಿದ ಮೇಲೆ ನಾನೂ ಚಿತ್ರರಂಗದಲ್ಲಿ ಏಕೆ ಪ್ರಯತ್ನಿಸಬಾರದು ಎನ್ನುವ ಆಸೆ ಮೂಡಿತ್ತು. ಇದೀಗ ಕೈಗೂಡಿದೆ. ಇಡೀ ಕುಟುಂಬ ಮುಜುಗರವಿಲ್ಲದೆ ಕುಳಿತು ನೋಡಬಹುದಾದ ಚಿತ್ರವನ್ನು ನಾವೆಲ್ಲ ಸೇರಿ ಮಾಡುತ್ತಿದ್ದೇವೆ ಎಂದು ಹೇಳಿದರು.

 

ಈ ಚಿತ್ರದ ಮತ್ತೊಂದು ಪ್ರಮುಖ ಪಾತ್ರವನ್ನು ಶಿವಪ್ಪ ಕುಡ್ಲೂರು ನಿರ್ವಹಿಸುತ್ತಿದ್ದಾರೆ, ತಮ್ಮ ಪಾತ್ರದ ಕುರಿತಂತೆ ಮಾತನಾಡಿದ ಅವರು ಚಿತ್ರದಲ್ಲಿ ನಾನು ಲಾಯರ್ ಪಾತ್ರ ಮಾಡುತ್ತಿದ್ದೇನೆ. ಈ ದಂಪತಿಗಳಲ್ಲಿ ಭಿನ್ನಾಭಿಪ್ರಾಯ ಬಂದಾಗ ಅದನ್ನು ಹೇಗೆ ನಿಭಯಿಸುತ್ತೇನೆ ಎಂದು ನನ್ನ ಪಾತ್ರದ ಮೂಲಕ ಹೇಳಲಾಗಿದೆ ಎಂದು ತಿಳಿಸಿದರು, ಇನ್ನು ಮಕ್ಕಳ ಪಾತ್ರ ನಿರ್ವಹಿಸಿರುವ ಮನೋಜ್ಞ ಕುಡ್ಲುರು ಹಾಗೂ ವಿನಯ್ ಹಾಸನ ತಮ್ಮ ಪಾತ್ರಗಳ ಕುರಿತು ಮಾಹಿತಿ ಹಂಚಿಕೊಂಡರು.

 

ಶಿವಣ್ಣ ಅವರ ಸ್ನೇಹಿತರೂ ಆದ ಬಿಜಾಪುರ ಮೂಲದ ಸಿದ್ದು ಸಾಹುಕಾರ ಅವರು ಈ ಚಿತ್ರತಂಡಕ್ಕೆ ಬೆನ್ನೆಲುಬಾಗಿ ನಿಂತಿದ್ದಾರೆ. ಈ ಚಿತ್ರದಲ್ಲಿ 4 ಹಾಡುಗಳಿದ್ದು, ದಿನೆಶ್ ಈಶ್ವರ್ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ, ಸಿ.ನಾರಾಯಣ್ ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ,

Spread the love
Continue Reading
Click to comment

Leave a Reply

Your email address will not be published. Required fields are marked *

Cinema News

Road King | ಹಾಲಿವುಡ್ ನಿರ್ದೇಶಕರಿಂದ ಕನ್ನಡ ಚಿತ್ರ ಜೂನ್ 23ಕ್ಕೆ ಬಿಡುಗಡೆಯಾಗಲಿದೆ ‘ರೋಡ್ ಕಿಂಗ್’

Published

on

By

ಮತೀನ್ ಹುಸೇನ್ ಅಭಿನಯದ ‘ರೋಡ್ ಕಿಂಗ್’ ಚಿತ್ರವು ಇದೇ ತಿಂಗಳ 23ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ವಿಶೇಷವೆಂದರೆ, Randy Kent ಎಂಬ ಹಾಲಿವುಡ್ ನಿರ್ದೇಕರು ಈ ಚಿತ್ರವನ್ನು ನಿರ್ದೇಶಸಿದ್ದಾರೆ.

 

 

‘ರೋಡ್ ಕಿಂಗ್’ ಚಿತ್ರದ ನಾಯಕ ಮತ್ತು ನಿರ್ಮಾಪಕರೂ ಆಗಿರುವ ಮತೀನ್ ಹುಸೇನ್, ಮೂಲತಃ ಬೆಂಗಳೂರಿನವರಾದರೂ ಬೆಳೆದಿದ್ದೆಲ್ಲಾ ಅಮೇರಿಕಾದಲ್ಲಿ. ಕೋಲಾರದಲ್ಲಿ ನಡೆದ ನೈಜ ಘಟನೆ ಆಧರಿಸಿ ಒಂದು ಸಣ್ಣ ಬಜೆಟ್ನ ಚಿತ್ರ ಮಾಡುವುದಕ್ಕೆ ಹೊರಟಾಗ, ಸೂಕ್ತ ನಿರ್ದೇಶಕರು ಸಿಗಲಿಲ್ಲವಂತೆ. ಆಗ ಅವರಿಗೆ ನೆನಪಾಗಿದ್ದೇ ರಾಂಡಿ ಕೆಂಟ್. ಮತೀನ್ ಮತ್ತು ರಾಂಡಿ ಹಳೆಯ ಸ್ನೇಹಿತರು. ಸ್ನೇಹದಲ್ಲಿ ಚಿತ್ರ ಮಾಡಿಕೊಡುವುದಕ್ಕೆ ಕೇಳಿಕೊಂಡಾಗ, ಮೊದಲು ರಾಂಡಿ ಹಿಂದೇಟು ಹಾಕಿದರಂತೆ. ಕಾರಣ, ಅವರಿಗೆ ಕನ್ನಡ ಭಾಷೆ ಗೊತ್ತಿಲ್ಲದಿರುವುದು. ಕೊನೆಗೆ ಒಪ್ಪಿ ಅವರು ಚಿತ್ರ ನಿರ್ದೇಶನಕ್ಕೆ ಕೈಹಾಕಿದ್ದಾರೆ.

 

ಅಂದಹಾಗೆ, ಈ ಚಿತ್ರದ ನಿರ್ದೇಶನವನ್ನು ದೂರದ ಅಮೇರಿಕಾದಲ್ಲಿದ್ದುಕೊಂಡು ಸ್ಕೈಪ್ ಮೂಲಕವೇ ಮಾಡಿದ್ದಾರೆ. ಅದಕ್ಕೆ ಕಾರಣವೂ ಇದೆ. ಈ ಬಗ್ಗೆ ಮಾತನಾಡುವ ಮತೀನ್, ‘ಚಿತ್ರೀಕರಣಕ್ಕೆ ಎಲ್ಲ ತಯಾರಿಯೂ ಆಗಿತ್ತು. ಆದರೆ, ರಾಂಡಿಗೆ ವೀಸಾ ಸಿಗಲಿಲ್ಲ. ಎರಡನೆಯ ಬಾರಿಗೂ ಅದೇ ರೀತಿ ಆಯಿತು. ಕೊನೆಗೆ ಅವರು ಸ್ಕೈಪ್ ಮೂಲಕವೇ ಚಿತ್ರ ನಿರ್ದೇಶನ ಮಾಡಿದ್ದಾರೆ’ ಎನ್ನುತ್ತಾರೆ ಮತೀನ್. ಮತೀನ್ ಇದಕ್ಕೂ ಮುನ್ನ ‘ಬಿಂದಾಸ್ ದಾದಾಗಿರಿ’ ಎಂಬ ರಿಯಾಲಿಟಿ ಕಾರ್ಯಕ್ರಮದಲ್ಲಿ ವಿಜೇತರಾಗಿದ್ದು, ಇದೇ ಮೊದಲ ಬಾರಿಗೆ ನಾಯಕನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಅವರಿಗೆ ನಾಯಕಿಯಾಗಿ ‘ರನ್ ಆಂಟೋನಿ’ ಖ್ಯಾತಿಯ ರುಕ್ಸರ್ ನಟಿಸಿದ್ದು, ಲೀಲಾ ಮೋಹನ್, ಹರೀಶ್ ಸೆಜೆಕೆನ್, ನಯನಾ ಶೆಟ್ಟಿ ಮುಂತಾದವರು ನಟಿಸಿದ್ದಾರೆ. ಚಿತ್ರಕ್ಕೆ ಆರಿಫ್ ಲಲಾನಿ ಛಾಯಾಗ್ರಹಣ ಮಾಡಿದ್ದು, ಹಾಲಿವುಡ್ನ ಜನಪ್ರಿಯ ಸೌಂಡ್ ಡಿಸೈನರ್ ಸ್ಕಾಟ್ ವುಲ್ಫ್ ಈ ಚಿತ್ರಕ್ಕೆ ಕೆಲಸ ಮಾಡಿದ್ದಾರೆ.

 

 

ಈಗಾಗಲೇ ಜಗತ್ತಿನಾದ್ಯಂತ ಹಲವು ಅಂತಾರಾಷ್ಟ್ರೀಯ ಚಿತ್ರೋತ್ಸವಗಳಲ್ಲಿ ಪ್ರದರ್ಶನವಾಗುವುದರ ಜೊತೆಗೆ ಪ್ರಶಸ್ತಿಗಳನ್ನು ಬಾಚಿಕೊಂಡಿರುವ ‘ರೋಡ್ ಕಿಂಗ್’ ಚಿತ್ರಕ್ಕೆ ಚಂದನ್ ಶೆಟ್ಟಿ ಸಂಗೀತ ಮತ್ತು ಶ್ರೀ ಕ್ರೇಜಿ ಮೈಂಡ್ಸ್ ಅವರ ಸಂಕಲನ ಈ ಚಿತ್ರಕ್ಕಿದೆ.

Spread the love
Continue Reading

Cinema News

ತಮಿಳಿಗೆ ಆಸ್ಕರ್ ಪ್ರಶಸ್ತಿ ವಿಜೇತ ಎಂ.ಎಂ. ಕೀರಣವಾಣಿ; ‘ಜಂಟಲ್ಮ್ಯಾನ್ 2’ ಚಿತ್ರಕ್ಕೆ ಸಂಗೀತ ನಿರ್ದೇಶನ

Published

on

By

RRR ಚಿತ್ರದ ನಾಟ್ಟು ನಾಟ್ಟು ಹಾಡಿಗೆ ಆಸ್ಕರ್ ಪ್ರಶಸ್ತಿ ತಮ್ಮದಾಗಿಸಿಕೊಂಡಿದ್ದ ತೆಲುಗಿನ ಖ್ಯಾತ ಸಂಗೀತ ನಿರ್ದೇಶಕ ಎಂ.ಎಂ. ಕೀರವಾಣಿ ಅವರಿಗೆ ತಮಿಳು ಚಿತ್ರರಂಗ ಹೊಸದಲ್ಲ. ಈಗಾಗಲೇ ಕೆಲವು ತಮಿಳು ಚಿತ್ರಗಳಿಗೆ ಸಂಗೀತ ಸಂಯೋಜಿಸಿರುವ ಕೀರವಾಣಿ, ಈಗ ಮತ್ತೆ ಕಾಲಿವುಡ್ನತ್ತ ಪ್ರಯಾಣ ಬೆಳೆಸಿದ್ದಾರೆ.
ಈ ಹಿಂದೆ ‘ಜಂಟಲ್ಮ್ಯಾನ್’, ‘ಕಾದಲ್ ದೇಶಂ’ ಸೇರಿದಂತೆ ಹಲವು ಸೂಪರ್ ಹಿಟ್ ತಮಿಳು ಚಿತ್ರಗಳನ್ನು ನಿರ್ಮಿಸಿರುವ ಕೆ.ಟಿ. ಕುಂಜುಮೋನ್, ಈಗ ಬಹಳ ದಿನಗಳ ನಂತರ ‘ಜಂಟಲ್ಮ್ಯಾನ್ 2’ ಚಿತ್ರದ ಮೂಲಕ ನಿರ್ಮಾಣಕ್ಕೆ ವಾಪಸ್ಸಾಗಿದ್ದಾರೆ. ಈ ಚಿತ್ರದ ಚಿತ್ರೀಕರಣ ಸದ್ಯದಲ್ಲೇ ಪ್ರಾರಂಭವಾಗಿದ್ದು, ಈ ಚಿತ್ರಕ್ಕೆ ಸಂಗೀತ ಸಂಯೋಜಿಸುವುದಕ್ಕೆ ಕೀರವಾಣಿ ಒಪ್ಪಿದ್ದಾರೆ.

ಎರಡು ತಿಂಗಳ ಹಿಂದಷ್ಟೇ ಅಮೇರಿಕಾದಲ್ಲಿ ನಡೆದ ಸಮಾರಂಭದಲ್ಲಿ ಕೀರವಾಣಿ ಅವರಿಗೆ ಆಸ್ಕರ್ ಪ್ರಶಸ್ತಿ ಲಭಿಸಿತ್ತು. ಅವರು ಅಲ್ಲಿಂದ ಭಾರತಕ್ಕೆ ಬಂದ ಮೇಲೆ, ಅವರನ್ನು ಹೈದರಾಬಾದ್ನಲ್ಲಿ ‘ಜಂಟಲ್ಮ್ಯಾನ್ 2’ ಚಿತ್ರದ ನಿರ್ದೇಶಕ ಎ. ಗೋಕುಲ್ ಕೃಷ್ಣ ಭೇಟಿಯಾಗಿದ್ದಾರೆ. ಗೋಕುಲ್ ಹೇಳಿದ ಕಥೆ ಕೇಳಿ ಖುಷಿಯಾದ ಕೀರವಾಣಿ, ತಕ್ಷಣವೇ ಚಿತ್ರಕ್ಕೆ ಸಂಗೀತ ಸಂಯೋಜಿಸುವುದಾಗಿ ಹೇಳಿದ್ದಾರೆ. ಅಷ್ಟೇ ಅಲ್ಲ, ತಕ್ಷಣವೇ ನಿರ್ಮಾಪಕ ಕುಂಜುಮೋನ್ ಅವರಿಗೆ ಕರೆ ಮಾಡಿ, ಮುಂದಿನ ತಿಂಗಳಿನಿಂದ ಸಂಗೀತ ಸಂಯೋಜನೆ ಕೆಲಸ ಪ್ರಾರಂಭಿಸುವುದಾಗಿ ಹೇಳಿದ್ದಾರೆ.‘ಜಂಟಲ್ಮ್ಯಾನ್ 2’ ಚಿತ್ರವು ಸದ್ಯ ಪ್ರೀ-ಪ್ರೊಡಕ್ಷನ್ ಹಂತದಲ್ಲಿದ್ದು, ಸದ್ಯದಲ್ಲೇ ಕಲಾವಿದರು ಮತ್ತು  ತಂತ್ರಜ್ಞರ ಪಟ್ಟಿ ಹೊರಬೀಳಲಿದೆ.

Spread the love
Continue Reading

Cinema News

Rudra Garuda Purana | “ರುದ್ರ ಗರುಡ ಪುರಾಣ”ದಲ್ಲಿ ಪೊಲೀಸ್ ಅಧಿಕಾರಿಯಾದ ರಿಷಿ .

Published

on

By

“ಆಪರೇಶನ್ ಅಲಮೇಲ್ಲಮ್ಮ”, “ಕವಲುದಾರಿ” ಮುಂತಾದ ಚಿತ್ರಗಳ ಮೂಲಕ ಮನೆಮಾತಾಗಿರುವ ನಟ ರಿಷಿ ನಾಯಕರಾಗಿ ನಟಿಸುತ್ತಿರುವ, ಕೆ.ಎಸ್ ನಂದೀಶ್ ನಿರ್ದೇಶನದ ನೂತನ ಚಿತ್ರದ ಮುಹೂರ್ತ ಸಮಾರಂಭ ಹಾಗೂ ಶೀರ್ಷಿಕೆ ಅನಾವರಣ ಕಾರಂಜಿ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ನೆರವೇರಿತು. ನಟ ನೀನಾಸಂ ಸತೀಶ್ ಚಿತ್ರದ ಮೊದಲ ಸನ್ನಿವೇಶಕ್ಕೆ ಆರಂಭ ಫಲಕ ತೋರಿದರು ಹಾಗೂ ಶೀರ್ಷಿಕೆ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. “ರುದ್ರ ಗರುಡ ಪುರಾಣ” ಎಂದು ಚಿತ್ರಕ್ಕೆ ಹೆಸರಿಡಲಾಗಿದೆ.

“ಚಂಬಲ್”, ” ಡಿಯರ್ ವಿಕ್ರಮ್” ಚಿತ್ರಗಳು ಸೇರಿದಂತೆ ಕೆಲವು ಚಿತ್ರಗಳನ್ನು ನಿರ್ದೇಶಿಸಿರುವ ಕೆ.ಎಸ್ ನಂದೀಶ್ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಕಥೆ ಹಾಗೂ ಚಿತ್ರಕಥೆಯನ್ನು ನಿರ್ದೇಶಕರೆ ಬರೆದಿದ್ದಾರೆ. ಸಂಭಾಷಣೆ ರಘು ನಿಡುವಳ್ಳಿ ಅವರದು. ಉದ್ಯಮಿ ಲೋಹಿತ್ ನಿರ್ಮಾಣ ಮಾಡುತ್ತಿದ್ದಾರೆ. ರಿಷಿ ಅವರಿಗೆ ನಾಯಕಿಯಾಗಿ ಪ್ರಿಯಾಂಕ ಕುಮಾರ್ ಅಭಿನಯಿಸುತ್ತಿದ್ದಾರೆ.

 

 

“ರುದ್ರ ಗರುಡ ಪುರಾಣ” ವಿಭಿನ್ನ ಕಥಾಹಂದರ ಹೊಂದಿರುವ ಚಿತ್ರ. ಇಂದಿನಿಂದ ಚಿತ್ರೀಕರಣ ಆರಂಭವಾಗಲಿದೆ. ಸಿನಿಮಾ ಜನರ ಮೇಲೆ ಉತ್ತಮ ಪ್ರಭಾವ ಬೀರಬೇಕು. ಅಂತಹ ಸಿನಿಮಾವನ್ನು ಜನರಿಗೆ ಕೊಡುವ ಆಸೆ ನನಗೆ. 2022 UPSC ಪರೀಕ್ಷೆಯಲ್ಲಿ 265ನೇ ರ‍್ಯಾಂಕ್‌ ಪಡೆದಿರುವ ಮೈಸೂರು ಮೂಲದ ಕೆ‌.ಸೌರಭ್ ಅವರು ಸಂದರ್ಶನವೊಂದರಲ್ಲಿ ನನಗೆ ಪುನೀತ್ ರಾಜಕುಮಾರ್ ಅಭಿನಯದ “ಪೃಥ್ವಿ” ಚಿತ್ರ ಪ್ರೇರಣೆ ಎಂದಿದ್ದಾರೆ. “ಪೃಥ್ವಿ” ಚಿತ್ರ ಸೌರಭ್ ಅವರಿಗಷ್ಟೆ ಅಲ್ಲ. ಸಾಕಷ್ಟು ಜನರಿಗೆ ಸ್ಪೂರ್ತಿಯಾಗಿದೆ‌. ನಾನು ಆ ಚಿತ್ರದ ಸಹ ನಿರ್ದೇಶಕನಾಗಿ ಕಾರ್ಯ ನಿರ್ವಹಿಸಿದ್ದೆ.‌ ನಾವು ಮಾಡುವ ಚಿತ್ರ, ಈ ರೀತಿ ಜನರಿಗೆ ತಲುಪಿದಾಗ ಮುಂದೆ ಇಂತಹ ಹೆಚ್ಚುಹೆಚ್ಚು ಚಿತ್ರಗಳನ್ನು ಮಾಡುವ ಹುಮ್ಮಸ್ಸು ನಿರ್ದೇಶಕನಿಗೆ ಹೆಚ್ಚಾಗುತ್ತದೆ ಎಂದು ನಿರ್ದೇಶಕ ಕೆ.ಎಸ್ ನಂದೀಶ್ ತಿಳಿಸಿದರು.

 

ನಾನು ಈ ಚಿತ್ರದಲ್ಲಿ ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದೇನೆ. ಈ ಹಿಂದೆ “ಕವಲುದಾರಿ” ಚಿತ್ರದಲ್ಲೂ ಪೊಲೀಸ್ ಅಧಿಕಾರಿಯ ಪಾತ್ರ ಮಾಡಿದ್ದೆ. ಹಾಗಾಗಿ, ಅದೇ ಜಾನರ್ ನ ಇನ್ನೊಂದು ಚಿತ್ರ ಮಾಡುವುದಕ್ಕೆ ಇಷ್ಟವಿರಲಿಲ್ಲ. ಆದರೆ ನಂದೀಶ್ ಅವರು ಈ ಚಿತ್ರದ ಕಥೆ ಕೇಳಿದಾಗ ಬಹಳ ಇಷ್ಟವಾಯಿತು. ಎರಡೂ ಚಿತ್ರಗಳ ಮಧ್ಯೆ ಯಾವುದೇ ಹೋಲಿಕೆ ಇಲ್ಲ. ಇದರಲ್ಲಿ ನಾನು ಪೊಲೀಸ್ ಅಧಿಕಾರಿಯಾದರೂ ಬಹಳ ವಿಭಿನ್ನವಾಗಿದೆ. ಜೊತೆಗೆ ಕರ್ಮ, ಪಾಪ, ಪುಣ್ಯಕ್ಕೆ ಸಂಬಂಧಿಸಿದ ಗರುಡ ಪುರಾಣದ ಸಾಕಷ್ಟು ಅಂಶಗಳು ಈ ಚಿತ್ರದಲ್ಲಿದೆ. ಈ ಚಿತ್ರಕ್ಕೆ “ಗರುಡ ಪುರಾಣ” ಎಂದು ಹೆಸರಿಡಲು ನಿರ್ಧರಿಸಿದ್ದೆವು. ಚಿತ್ರದಲ್ಲಿ ನನ್ನ ಪಾತ್ರದ ಹೆಸರು ರುದ್ರ. ಹಾಗಾಗಿ “ರುದ್ರ ಗರುಡ ಪುರಾಣ” ಅಂತ ಶೀರ್ಷಿಕೆ ಇಡಲಾಗಿದೆ. ಚಿತ್ರಕ್ಕೆ ಚಾಲನೆ ನೀಡಿದ ನೀನಾಸಂ ಸತೀಶ್ ಅವರಿಗೆ ಧನ್ಯವಾದ ಎಂದರು ನಾಯಕ ರಿಷಿ.

ನಾಯಕಿ ಪ್ರಿಯಾಂಕ ಕುಮಾರ್, ನಟರಾದ ಶಿವರಾಜ್ ಕೆ ಆರ್ ಪೇಟೆ, ಪವನ್ ಮುಂತಾದವರು ಚಿತ್ರದ ಕುರಿತು ಮಾತನಾಡಿದರು

Spread the love
Continue Reading

Cinema News

ಜೂನ್ 16 ರಂದು “ಐರಾವನ್” ಆಗಮನ ..ಇದು ಜೆ.ಕೆ ಅಭಿನಯದ ಚಿತ್ರ .

Published

on

By

ಕಿರುತೆರೆ ಹಾಗೂ ಹಿರಿತೆರೆಯಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ನಟ ಜೆ‌.ಕೆ ನಾಯಕರಾಗಿ ನಟಿಸಿರುವ “ಐರಾವನ್” ಚಿತ್ರ ಇದೇ ಜೂನ್ ಹದಿನಾರರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈ ಚಿತ್ರದ ಕುರಿತು ಚಿತ್ರತಂಡದ ಸದಸ್ಯರು
ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ನಾನು ಮೂಲತಃ ವೈದ್ಯ. ಕೋವಿಡ್ ಸಮಯದಲ್ಲಿ ನಿರ್ದೇಶಕ ರಾಮ್ಸ್ ರಂಗ ಈ ಚಿತ್ರದ ಕಥೆ ಹೇಳಿದರು. ಕಥೆ ಇಷ್ಟವಾಯಿತು. ಆ ಸಮಯದಲ್ಲಿ ಚಿತ್ರರಂಗದ ಬಹುತೇಕರು ಸಂಕಷ್ಟದಲ್ಲಿದ್ದರು. ಈ ಸಂದರ್ಭದಲ್ಲಿ ನಾನು ಸಿನಿಮಾ ನಿರ್ಮಾಣ ಮಾಡಿದರೆ ಅನೇಕ ಜನರಿಗೆ ಅನುಕೂಲವಾಗುತ್ತದೆ ಎಂಬ ಉದ್ದೇಶ ನನ್ನದಾಗಿತ್ತು. ಈಗ ಚಿತ್ರತಂಡದ ಸಹಕಾರದಿಂದ ಚಿತ್ರ ಚೆನ್ನಾಗಿ ಮೂಡಿಬಂದಿದೆ. ಇದೇ ಜೂನ್ 16 ರಂದು ಬಿಡುಗಡೆಯಾಗುತ್ತಿದೆ. ನೋಡಿ. ಪ್ರೋತ್ಸಾಹ ನೀಡಿ ಎಂದರು ನಿರ್ಮಾಪಕ ಡಾ||ನಿರಂತರ ಗಣೇಶ್.

 

 

“ಐರಾವನ್” ಎಂದರೆ ಮಹಾಭಾರತದಲ್ಲಿ ಬರುವ ಪಾತ್ರವೊಂದರ ಹೆಸರು. ಇದು ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿದೆ‌. ಬೆಂಗಳೂರು, ಮಂಗಳೂರು ಮುಂತಾದ ಕಡೆ ಚಿತ್ರೀಕರಣ ಮಾಡಿದ್ದೇವೆ. ಸಮುದ್ರದಲ್ಲಿ ಹೆಚ್ಚಿನ ಚಿತ್ರೀಕರಣ ಮಾಡಿರುವುದು ಚಿತ್ರದ ವಿಶೇಷ ಎಂದು ನಿರ್ದೇಶಕ ರಾಮ್ಸ್ ರಂಗ ತಿಳಿಸಿದರು.

“ಐರಾವನ್” ಚಿತ್ರದ ಟೀಸರ್ ಗೆ ತಮ್ಮಿಂದ ಸಿಕ್ಕಿರುವ ಪ್ರೋತ್ಸಾಹಕ್ಕೆ ನಾನು ಚಿರ ಋಣಿ. ಕೆಲವರಿಗೆ ಈ ಚಿತ್ರದ ಬಗ್ಗೆ ಗೊಂದಲವಿತ್ತು. ಇದು ಹಿಂದಿ ಚಿತ್ರದ ಡಬ್ ಇರಬಹುದು ಎಂದು.. ಆದರೆ ಇದು ಪಕ್ಕಾ ಕನ್ನಡ ಚಿತ್ರ. ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿದೆ. ಎರಡು ಶೇಡ್ ಗಳಲ್ಲಿ ನನ್ನ ಪಾತ್ರವಿರುತ್ತದೆ. ನಿರ್ದೇಶಕರು ಒಳ್ಳೆಯ ಕಥೆ ಮಾಡಿದ್ದಾರೆ. ಹಾಡುಗಳು ಚೆನ್ನಾಗಿದೆ. ನಿರ್ಮಾಪಕ ಡಾ||ನಿರಂತರ ಗಣೇಶ್ ಯಾವುದೇ ಕೊರತೆ ಬಾರದಂತೆ ಚಿತ್ರ ನಿರ್ಮಾಣ ಮಾಡಿದ್ದಾರೆ. ಜೂನ್ 16 ಚಿತ್ರ ತೆರೆಗೆ ಬರುತ್ತಿದೆ ಎಂದು ನಾಯಕ ಜೆ.ಕೆ ತಿಳಿಸಿದರು.

 

 

ತಮ್ಮ ಪಾತ್ರದ ಬಗ್ಗೆ ನಾಯಕಿ ಅದ್ವಿತಿ ಶೆಟ್ಟಿ, ಹಾಗೂ ನವನಟ ವಿವೇಕ್, ಹಾಡುಗಳ ಬಗ್ಗೆ ಸಂಗೀತ ನಿರ್ದೇಶಕ ಪ್ರದೀಪ್ ವರ್ಮ, ಛಾಯಾಗ್ರಹಣದ ಕುರಿತು ದೇವೇಂದ್ರ ಮಾಹಿತಿ ನೀಡಿದರು. ಕಾರ್ಯಕಾರಿ ನಿರ್ಮಾಪಕ ಸಂತೋಷ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Spread the love
Continue Reading

Cinema News

ಕೇಳುಗರ ಮನ ಗೆಲ್ಲುತ್ತಿದೆ “ಮೆಲೋಡಿ ಡ್ರಾಮ”.ದ ಹಾಡು .

Published

on

By

ಪ್ರೈಮ್ ಸ್ಟಾರ್ ಸ್ಟುಡಿಯೋ ಲಾಂಛನದಲ್ಲಿ ಎಂ.ನಂಜುಂಡ ರೆಡ್ಡಿ ಅವರು ನಿರ್ಮಿಸಿರುವ, ಮಂಜು ಕಾರ್ತಿಕ್ ನಿರ್ದೇಶನದ “ಮೆಲೋಡಿ ಡ್ರಾಮ” ಚಿತ್ರಕ್ಕಾಗಿ ಹೃದಯ ಶಿವ ಬರೆದಿರುವ “ಯಾರು ಬರೆಯದ ಕವಿತೆ” ಎಂಬ ಹಾಡು ಇತ್ತೀಚೆಗೆ ಬಿಡುಗಡೆಯಾಗಿ, ಜನಮನಸೂರೆಗೊಳ್ಳುತ್ತಿದೆ. ಈಗಾಗಲೇ ಒಂದು ಮಿಲಿಯನ್ ಗೂ ಅಧಿಕ ವೀಕ್ಷಣೆಯಾಗಿ ಮುನ್ನುಗುತ್ತಿದೆ. ಕಿರಣ್ ರವೀಂದ್ರನಾಥ್ ಸಂಗೀತ ನೀಡಿರುವ ಈ ಹಾಡನ್ನು ಪಲಾಕ್ ಮುಚ್ಚಲ್ ಹಾಗೂ ವರುಣ್ ಪ್ರದೀಪ್ ಹಾಡಿದ್ದಾರೆ.

 

ಚಿತ್ರದ ಮೊದಲ ಹಾಡು ಇದಾಗಿದ್ದು, ಒಟ್ಟು ಏಳು ಹಾಡುಗಳು ಈ ಚಿತ್ರದಲ್ಲಿದೆ. ಸೋನು ನಿಗಮ್ , ಕೈಲಾಶ್ ಖೇರ್, ಪಲಾಕ್ ಮುಚ್ವಲ್, ಮುಂತಾದ ಖ್ಯಾತ ಗಾಯಕರು ಈ ಹಾಡುಗಳನ್ನು ಹಾಡಿದ್ದಾರೆ. ಪ್ರಥಮಪ್ರತಿ ಸಿದ್ದವಾಗಿದ್ದು, ಚಿತ್ರ ಸದ್ಯದಲ್ಲೇ ತೆರೆಗೆ ಬರಲಿದೆ.

 

 

ಸತ್ಯ ಈ ಚಿತ್ರದ ನಾಯಕನಾಗಿ, ಸುಪ್ರೀತ ಸತ್ಯನಾರಾಯಣ ಅವರು ನಾಯಕಿಯಾಗಿ ನಟಿಸಿದ್ದಾರೆ. ರಂಗಾಯಣ ರಘು, ಅನು ಪ್ರಭಾಕರ್, ರಾಜೇಶ್ ನಟರಂಗ, ಬಾಲು ರಾಜವಾಡಿ, ಲಕ್ಷ್ಮೀ ಸಿದ್ದಯ್ಯ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

 

Spread the love
Continue Reading

Trending News