Cinema News
ಕನ್ನಡ ಮತ್ತು ತೆಲುಗಿನಲ್ಲಿ ತಯಾರಾಗುತ್ತಿದೆ ‘ಇಬ್ಬರ ನಡುವಿನ ಮುದ್ದಿನ ರಾಣಿ’

ಕೊರೋನ ಆರ್ಭಟದಿಂದ ಮಂಕಾಗಿದ್ದ ಕನ್ನಡ ಚಲನಚಿತ್ರರಂಗ ಈಗ ನಿಧಾನವಾಗಿ ಸುಧಾರಿಸಿಕೊಳ್ಳುತ್ತಿದೆ. ಸಾಕಷ್ಟು ನೂತನ ಚಿತ್ರಗಳು ಕೆಲವು ದಿನಗಳಿಂದ ಆರಂಭವಾಗುತ್ತಿದೆ. ಈ ಸಾಲಿಗೆ ಸೇರ್ಪಡೆಯಾಗಿರುವ ಮತ್ತೊಂದು ನೂತನ ಚಿತ್ರ ‘ಇಬ್ಬರ ನಡುವಿನ ಮುದ್ದಿನ ರಾಣಿ’. ಇತ್ತೀಚೆಗೆ ಈ ಚಿತ್ರದ ಮುಹೂರ್ತ ಸಮಾರಂಭ ದೊಡ್ಡಬಳ್ಳಾಪುರ ಬಳಿಯಿರುವ ಅಂಗಾಸನ ರೆಸಾರ್ಟ್ ನಲ್ಲಿ ನೆರವೇರಿತು. ಕನ್ನಡ ಹಾಗೂ ತೆಲುಗು ಭಾಷೆಗಳಲ್ಲಿ ಈ ಚಿತ್ರ ನಿರ್ಮಾಣವಾಗುತ್ತಿದೆ. ಚಿತ್ರದ ಮೊದಲ ಸನ್ನಿವೇಶಕ್ಕೆ ysrcp state joint Secretary ಕರ್ಮೂರು ವೆಂಕಟ ರೆಡ್ಡಿ ಆರಂಭ ಫಲಕ ತೋರುವ ಮೂಲಕ ಚಾಲನೆ ನೀಡಿದರು.
ಸೂರಜ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಸೌರಭ್ ಕಿಶೋರ್ ಈ ಚಿತ್ರ ನಿರ್ಮಿಸುತ್ತಿದ್ದಾರೆ. ಪಿ.ಎಂ.ಆರ್ ಕೋಣ್ಣಾರೆಡ್ಡಿ ಈ ಚಿತ್ರದ ಸಹ ನಿರ್ಮಾಪಕರು. ವಿಜಯ್ ಕುಮಾರ್ ಹಾಗೂ ಮಧುಬಾಬು ಅವರು ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ರೊಮ್ಯಾಂಟಿಕ್ ಲವ್ ಸ್ಟೋರಿ ಆಧಾರಿತ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಎಂ.ಎಸ್.ಎನ್ ರಾಜಾ ನಿರ್ದೇಶಿಸುತ್ತಿದ್ದಾರೆ. ಕಥೆ, ಚಿತ್ರಕಥೆ, ಸಂಭಾಷಣೆಯನ್ನು ನಿರ್ದೇಶಕರೇ ಬರೆದಿದ್ದಾರೆ. ಬೆಂಗಳೂರು, ದೊಡ್ಡಬಳ್ಳಾಪುರ, ಮಡಿಕೇರಿ ಮುಂತಾದ ಕಡೆ ೧೫ ದಿನಗಳ ಕಾಲ ಒಂದೇ ಹಂತದ ಚಿತ್ರೀಕರಣ ನಡೆಯಲಿದೆ.
ನಾಲ್ಕು ಹಾಡುಗಳಿರುವ ಈ ಚಿತ್ರಕ್ಕೆ ಎಂ.ಎಂ.ಮೋಹನ್ ಸಂಗೀತ ನೀಡುತ್ತಿದ್ದಾರೆ. ಬಾಲು ಸುರೇಶ್ ಛಾಯಾಗ್ರಹಣ, ಸತ್ಯಬಾಬು ಸಂಕಲನ ಹಾಗೂ ಭೂಪತಿ ಯಾದಗಿರಿ ಅವರ ಕಲಾ ನಿರ್ದೇಶನ ಈ ಚಿತ್ರಕ್ಕಿದೆ.
ನಿರ್ಮಾಪಕ ಸೌರಭ್ ಕಿಶೋರ್ ಅವರು ನಾಯಕರಾಗಿ ನಟಿಸುತ್ತಿರುವ ಈ ಚಿತ್ರದ ತಾರಾಬಳಗದಲ್ಲಿ ಆಕಾಶ್ ಆರಾಧ್ಯ, ದಿವ್ಯ ರಾವ್, ರೂಪ ರಾಯಪ್ಪ, ಸಂಜನ ನಾಯ್ಡು, ಮಹೇಂದರ್, ವಿಕ್ಚರಿ ವಾಸು, ಶೇಷಗಿರಿ, ಅಂಜಲಿ, ಲೋರ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
Cinema News
ಜೂನ್ 16 ರಂದು “ಐರಾವನ್” ಆಗಮನ ..ಇದು ಜೆ.ಕೆ ಅಭಿನಯದ ಚಿತ್ರ .

Cinema News
ಕೇಳುಗರ ಮನ ಗೆಲ್ಲುತ್ತಿದೆ “ಮೆಲೋಡಿ ಡ್ರಾಮ”.ದ ಹಾಡು .

Cinema News
“ಘೋಸ್ಟ್” ಚಿತ್ರದ ಸೆಟ್ ಗೆ ಭೇಟಿ ನೀಡಿದ ಸಚಿವ ಮಧು ಬಂಗಾರಪ್ಪ .

Cinema News
ಡಾಲಿ ಧನಂಜಯ್ ನಿರ್ಮಾಣದ ‘ಟಗರು ಪಲ್ಯ’ ಸಿನಿಮಾಗೆ ಕುಂಬಳಕಾಯಿ …

Cinema News
ಸಿನಿಮಾ ಲೋಕಕ್ಕೆ ಕೆಜಿಎಫ್ ಮ್ಯೂಸಿಕ್ ಮಾಂತ್ರಿಕ ರವಿ ಬಸ್ರೂರು ಪುತ್ರ ಎಂಟ್ರಿ…’ಕ್ಲಿಕ್’ ಸಿನಿಮಾ ಮೂಲಕ ಬಣ್ಣ ಹಚ್ಚಿದ ಮಾಸ್ಟರ್ ಪವನ್ ಬಸ್ರೂರ್

-
Movie Reviews4 years ago
ವಿಕೇಂಡ್ಗೊಂದು ಮನ ಮುಟ್ಟುವ ಚಿತ್ರ – ವಿಮರ್ಶೆ – ರೇಟಿಂಗ್ – 3.25/5
-
Movie Reviews4 years ago
ರಾಮ್ ಜಾನುವಿನ ಮಧುರವಾದ ನೆನಪಿನ ಲವ್ಸ್ಟೋರಿ
-
Movie Reviews4 years ago
ಪಾರ್ವತಮ್ಮನ ಮಗಳಿಗೆ ಎಲ್ಲವೂ ಸಲೀಸು – ವಿಮರ್ಶೆ – ರೇಟಿಂಗ್ 3.5/5
-
Box Office3 years ago
ಮೂರು ದಿನಕ್ಕೆ “ಅವನೇ ಶ್ರೀಮನ್ನಾರಾಯಣ” ಗಳಿಸಿದ್ದು ಎಷ್ಟು ಕೋಟಿ?
-
Cinema News4 years ago
ಫಿಕ್ಸ್ ಆಯ್ತು ‘ಪೈಲ್ವಾನ್’ ಟ್ರೇಲರ್ ಬಿಡುಗಡೆ ದಿನಾಂಕ!
-
Box Office4 years ago
ಸ್ಯಾಂಡಲ್ ವುಡ್ ನಲ್ಲಿ ಸೋತ ಅಮ್ಮ – ಮಗ
-
Cinema News4 years ago
ಬಜಾರ್ ಧನ್ವೀರ್ಗೆ ಕಥೆ ಬರೆದ ಬಹದ್ದೂರ್ ಚೇತನ್
-
Reviews4 years ago
ದೆವ್ವಕ್ಕೂ ‘ಗಿಮಿಕ್’ ಮಾಡಿದ ಗಣೇಶ್ – ‘ಗಿಮಿಕ್’ ಟ್ರೇಲರ್ ವಿಮರ್ಶೆ
-
News4 years ago
‘ಗಟ್ಟಿಮೇಳ’ದ ಕ್ರಾಂತಿಯನ್ನು ನೇರವಾಗಿ ತರಲಿದೆ ”ಜೀ ಕನ್ನಡ”
-
News4 years ago
‘ನಾಯಕಿ’ಗೆ ಪ್ರಚಾರಕಿಯಾದ ನಟಿ ಹರಿಪ್ರಿಯಾ