Cinema News
ರಾಜೀವ್ ನಟನೆಯ “ಉಸಿರೇ ಉಸಿರೇ” ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆ ಮಾಡಿದ ಬಾದ್ ಶಾ ಕಿಚ್ಚ ಸುದೀಪ

ಬಿಗ್ ಬಾಸ್ ನಲ್ಲಿ ಭಾಗವಹಿಸಿ ಜನಮಸೂರೆಗಂಡಿದ್ದ ರಾಜೀವ್”ಉಸಿರೇ ಉಸಿರೇ” ಚಿತ್ರದ ನಾಯಕನಾಗಿ ನಟಿಸುತ್ತಿದ್ದಾರೆ. ನಗರದ ಖಾಸಗಿ ಹೋಟೆಲ್ ನಲ್ಲಿ ಈ ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆ ಸಮಾರಂಭ ಅದ್ದೂರಿಯಾಗಿ ನೆರವೇರಿತು.
ಬಾದ್ ಶಾ ಕಿಚ್ಚ ಸುದೀಪ ಮೋಷನ್ ಪೋಸ್ಟರ್ ಬಿಡುಗಡೆ ಮಾಡಿದರು.
ನಾನು ಈ ಸಮಾರಂಭಕ್ಕೆ ಬರಲು ಮುಖ್ಯ ಕಾರಣ ರಾಜೀವ. ಅವನಲ್ಲಿ ಈಗಲೂ ಏನೋ ಒಂಥರ ಮುಗ್ಧತೆ ಇದೆ. ಯಾವುದನ್ನು ಬೇಗ ನಂಬಿ ಬಿಡುತ್ತಾನೆ. ಪುಣ್ಯ. ಅವನ ಪಕ್ಕದಲ್ಲಿರುವ ಹೆಂಡತಿ ಜಾಣೆ. ಆ ಹುಡುಗಿ ಇವನಿಗೆ ಎಲ್ಲವನ್ನೂ ಹೇಳಿ ಕೊಡುತ್ತಿದ್ದಾರೆ. ಸಿ.ಸಿ.ಎಲ್ ದಿನಗಳಿಂದಲೂ ನನಗೆ ಈತ ಪರಿಚಯ. ಅವನು ಕ್ರಿಕೆಟ್ ಸರಿಯಾಗಿ ಅಭ್ಯಾಸ ಮಾಡಿದ್ದರೆ, ಇಷ್ಟೊತ್ತಿಗೆ ರಾಜ್ಯ ಮಟ್ಟದಲ್ಲಿ ಆಡುತ್ತದ್ದ. ಈ ಸಿನಿಮಾದಿಂದ ರಾಜೀವ್ ಗೆ ಒಳ್ಳೆದಾಗಲಿ ಎಂದ ಕಿಚ್ಚ ಸುದೀಪಇಂತಹ ಸಂದರ್ಭದಲ್ಲಿ ದೊಡ್ಡ ದೊಡ್ಡ ನಿರ್ಮಾಪಕರೇ ಚಿತ್ರ ನಿರ್ಮಾಣಕ್ಕೆ ಮುಂದಾಗುತ್ತಿಲ್ಲ. ಪ್ರದೀಪ್ ಅವರು ಈ ಸಮಯದಲ್ಲಿ ಚಿತ್ರ ನಿರ್ಮಿಸುತ್ತಿರುವುದು ತುಂಬಾ ಸಂತೋಷವಾಗಿದೆ. ಒಳ್ಳೆಯವರೆಲ್ಲಾ ಸೇರಿ ಮಾಡುವ ಕೆಲಸ ಒಳ್ಳೇಯದೇ ಆಗಿರುತ್ತದೆ ಎಂದು ಹಾರೈಸಿದ ಸುದೀಪ್, ತಮಗೆ ಚಿತ್ರತಂಡ ಉಡುಗೊರೆಯಾಗಿ ನೀಡಿದ ಬೆಳ್ಳಿ ಪೆನ್ನನ್ನು ನಿರ್ದೇಶಕರಿಗೆ ನೀಡಿ, ನಿಮ್ಮ ಮಾತುಗಳು ತುಂಬಾ ಚೆನ್ನಾಗಿತ್ತು, ನಿಮ್ಮ ಮುಂದಿನ ಕೆಲಸಗಳೆಲ್ಲಾ ಸುಲಲಿತವಾಗಿ ನಡೆಯಲಿ ಎಂದು ಹಾರೈಸಿದರು.
ನಾನು ಈ ತನಕ ಕೆಲವು ಚಿತ್ರಗಳಲ್ಲಿ ನಿಟಿಸಿದ್ದರೂ, ಇಂತಹ ವೇದಿಕೆ ಸಿಗಲು 10 ವರ್ಷ ಬೇಕಾಯಿತು. ಈ ಅವಕಾಶ ಮಾಡಿಕೊಟ್ಟ ನಿರ್ಮಾಪಕ, ನಿರ್ದೇಶಕರಿಗೆ ಧನ್ಯವಾದ ಎಂದು ಮಾತು ಆರಂಭಿಸಿದ ರಾಜೀವ್, ಮೋಷನ್ ಪೋಸ್ಟರ್ ಬಿಡುಗಡೆಗೆ ಆಗಮಿಸಿರುವ ಸುದೀಪ್ ಅವರಿಗೆ ವಿಶೇಷ ಧನ್ಯವಾದ ತಿಳಿಸಿದರು .
ನಾನು ಸುದೀಪ್ ಸರ್ ಜೊತೆ ಕಾರಿನಲ್ಲಿ ಬರುತ್ತಿದ್ದಾಗ, ಅವರ ನಟನೆಯ ಚಿತ್ರದ “ಉಸಿರೇ ಉಸಿರೇ” ಹಾಡು ಕೇಳಿದ್ದೆ. ನನಗೆ ಈ ಚಿತ್ರದ ಗೊತ್ತಿದ್ದರಿಂದ ನಿರ್ದೇಶಕರಿಗೆ ಫೋನ್ ಮಾಡಿ ನಮ್ಮ ಚಿತ್ರಕ್ಕೆ ಇದೇ ಶೀರ್ಷಿಕೆ ಇಡೋಣ. ಈಗಲೇ ನೊಂದಾಯಿಸಿ ಎಂದು ಹೇಳಿದೆ. ಚಿತ್ರಕ್ಕಾಗಿ ನಾನು ಹೆಚ್ಚು ವರ್ಕ್ ಔಟ್ ಏನು ಮಾಡಿಲ್ಲ. ಸಹಜವಾಗಿರುವ ಪಾತ್ರ. ನಮ್ಮ ನಾಲ್ಕುವರ್ಷಗಳ ಶ್ರಮಕ್ಕೆ ಈಗ ಉತ್ತಮ ಕಾಲ ಕೂಡಿ ಬಂದಿದೆ. ಎಲ್ಲರ ಹಾರೈಕೆಯು ನಮಗಿರಲಿ ಎಂದರು ರಾಜೀವ್.
ಇದು ನನ್ನ ಅಕ್ಷರಗಳು ಅನ್ನವಾಗುತ್ತಿರುವ ಸಮಯ. ಇದೊಂದು ಪಕ್ಕಾ ಪ್ರೇಮಕಥೆ. ಇಲ್ಲಿಯವರೆಗೂ ಅನೇಕ ಪ್ರೇಮಕಥೆಯುಳ್ಳ ಚಿತ್ರಗಳು ಬಂದಿವೆಯಾದರೂ ಇದು ವಿಭಿನ್ನ.
ಅಮರಪ್ರೇಮಿಗಳು ಎಂದರೆ ಎಲ್ಲರೂ ರೋಮಿಯೋ – ಜೂಲಿಯಟ್, ಸಲೀಂ – ಅನಾರ್ಕಲಿ ಅನ್ನುತ್ತಾರೆ. ಈ ಚಿತ್ರ ನೋಡಿದ ಮೇಲೆ ಪ್ರೇಕ್ಷಕರು ನಮ್ಮ ಕಥಾನಾಯಕ – ನಾಯಕಿಯನ್ನು ಈ ಸಾಲಿಗೆ ಸೇರಿಸಬಹುದು ಎಂದ ನಿರ್ದೇಶಕ ಸಿ.ಎಂ.ವಿಜಯ್ ಸೆಪ್ಟೆಂಬರ್ ಅಂತ್ಯದಲ್ಲಿ ಚಿತ್ರೀಕರಣ ಆರಂಭಿಸುವುದಾಗಿ ಹೇಳಿದ್ದಾರೆ.
ಎನ್ ಗೊಂಬೆ ಪ್ರೊಡಕ್ಷನ್ಸ್ ಲಾಂಛನದಲ್ಲಿ ಈ ಚಿತ್ರ ನಿರ್ಮಾಣ ಮಾಡುತ್ತಿರುವ ನಿರ್ಮಾಪಕ ಪ್ರದೀಪ್ ಯಾದವ್ ಮಾತನಾಡಿ, ನಾನು ಅನೇಕ ಕಥೆಗಳನ್ನು ಕೇಳಿದ್ದೀನಿ. ರಾಜೀವ್ ಹಾಗೂ ವಿಜಯ್ ಬಂದು ಹೇಳಿದ ಈ ಕಥೆ ನನ್ನ ಹೃದಯಕ್ಕೆ ಹತ್ತಿರವಾಯಿತು. ಹಾಗಾಗಿ ಚಿತ್ರ ನಿರ್ಮಾಣಕ್ಕೆ ಮುಂದಾದೆ ಎಂದರು.
ರಾಜೀವ್ ಗೆ ನಾಯಕಿಯಾಗಿ ಶ್ರೀಜಿತ ಘೋಷ್ ನಟಿಸುತ್ತಿದ್ದು, ಅವರು ಸಹ ತಮ್ಮ ಪಾತ್ರದ ಬಗ್ಗೆ ಮೆಚ್ಚುಗೆ ಮಾತನಾಡಿದರು. ಬೇರೆ ಭಾಷೆಯ ಚಿತ್ರಗಳಲ್ಲಿ ನಟಿಸಿರುವ ಶ್ರೀಜಿತ ಅವರಿಗೆ ಕನ್ನಡದಲ್ಲಿ ಇದು ಚೊಚ್ಚಲ ಚಿತ್ರ.
ಖ್ಯಾತ ನಟ ಅಲಿ ಅವರು ಸಹ ಚಿತ್ರದ ಕಥೆ ಇಷ್ಟವಾಯಿತು. ಹಾಗಾಗಿ ನಟಿಸಲು ಒಪ್ಪಕೊಂಡೆ. ಒಳ್ಳೆಯ ತಂಡದೊಂದಿಗೆ ಕೆಲಸ ಮಾಡುತ್ತಿರುವ ಖುಷಿ ಇದೆ ಎಂದರು. 83ನೇ ಇಸವಿಯಲ್ಲಿ ಅಂಬರೀಶ್ ಅವರ ಏಕಲವ್ಯ ಚಿತ್ರದಲ್ಲಿ ನಟಿಸಿದ್ದ ದಿನಗಳನ್ನು ಅಲಿ ನೆನಪಿಸಿಕೊಂಡರು.
ಸುಮಧುರ ಹಾಡುಗಳಿರುವ ಈ ಚಿತ್ರಕ್ಕೆ ವಿವೇಕ್ ಚಕ್ರವರ್ತಿ ಸಂಗೀತ ನೀಡುತ್ತಿದ್ದಾರೆ. ಸರವಣನ್ ಛಾಯಾಗ್ರಹಣ ಮಾಡುತ್ತಿದ್ದಾರೆ.
Cinema News
ಸದ್ಯದಲ್ಲೇ ಬರಲಿದೆ “ಪ್ರೀತಿಯ ರಾಯಭಾರಿ” ಹುಡಗ ನಕುಲ್ ಅಭಿನಯದ ಹೊಸಚಿತ್ರ

Cinema News
ವಿಜಯ್ ರಾಘವೇಂದ್ರ ನಟನೆಯ ರಾಘು ಸಿನಿಮಾದ ಮುಹೂರ್ತ…ಅಣ್ಣನ ಸಿನಿಮಾಗೆ ತಮ್ಮ ಶ್ರೀಮುರಳಿ ಕ್ಲ್ಯಾಪ್

Cinema News
ಅಬ್ಬಾ ಲಾಟ್ರಿ….ಬೆಂಕಿ ಸಿನಿಮಾದ ಓಕೆನಾ ಸಾಂಗ್ ಗೆ ಹೆಜ್ಜೆ ಹಾಕಿ Iphone 13 ಗೆಲ್ಲಿ?

Cinema News
ಓಂಪ್ರಕಾಶ್ ರಾವ್ ಹಾಗೂ ಆದಿತ್ಯ ಕಾಂಬಿನೇಶನಲ್ಲಿ “ಇಲಾಖೆ”.

Cinema News
ಜೂನ್ ನಲ್ಲಿ “ರಾಜಮಾರ್ತಾಂಡ”ನ ಆಗಮನ. ಚಿರಂಜೀವಿ ಸರ್ಜಾ ಅಭಿನಯದ ಕೊನೆಯ ಚಿತ್ರಕ್ಕೆ ಧ್ವನಿ ನೀಡಲಿದ್ದಾರೆ ಧ್ರುವ ಸರ್ಜಾ.

-
Movie Reviews3 years ago
ವಿಕೇಂಡ್ಗೊಂದು ಮನ ಮುಟ್ಟುವ ಚಿತ್ರ – ವಿಮರ್ಶೆ – ರೇಟಿಂಗ್ – 3.25/5
-
Movie Reviews3 years ago
ರಾಮ್ ಜಾನುವಿನ ಮಧುರವಾದ ನೆನಪಿನ ಲವ್ಸ್ಟೋರಿ
-
Box Office2 years ago
ಮೂರು ದಿನಕ್ಕೆ “ಅವನೇ ಶ್ರೀಮನ್ನಾರಾಯಣ” ಗಳಿಸಿದ್ದು ಎಷ್ಟು ಕೋಟಿ?
-
Movie Reviews3 years ago
ಪಾರ್ವತಮ್ಮನ ಮಗಳಿಗೆ ಎಲ್ಲವೂ ಸಲೀಸು – ವಿಮರ್ಶೆ – ರೇಟಿಂಗ್ 3.5/5
-
Cinema News3 years ago
ಫಿಕ್ಸ್ ಆಯ್ತು ‘ಪೈಲ್ವಾನ್’ ಟ್ರೇಲರ್ ಬಿಡುಗಡೆ ದಿನಾಂಕ!
-
Box Office3 years ago
ಸ್ಯಾಂಡಲ್ ವುಡ್ ನಲ್ಲಿ ಸೋತ ಅಮ್ಮ – ಮಗ
-
Cinema News3 years ago
ಬಜಾರ್ ಧನ್ವೀರ್ಗೆ ಕಥೆ ಬರೆದ ಬಹದ್ದೂರ್ ಚೇತನ್
-
Reviews3 years ago
ದೆವ್ವಕ್ಕೂ ‘ಗಿಮಿಕ್’ ಮಾಡಿದ ಗಣೇಶ್ – ‘ಗಿಮಿಕ್’ ಟ್ರೇಲರ್ ವಿಮರ್ಶೆ
-
News3 years ago
‘ಗಟ್ಟಿಮೇಳ’ದ ಕ್ರಾಂತಿಯನ್ನು ನೇರವಾಗಿ ತರಲಿದೆ ”ಜೀ ಕನ್ನಡ”
-
News3 years ago
‘ನಾಯಕಿ’ಗೆ ಪ್ರಚಾರಕಿಯಾದ ನಟಿ ಹರಿಪ್ರಿಯಾ