Connect with us

Cinema News

ಕಿರಣ್ ರಾಜ್ – ಪ್ರಸಿದ್ದ್ ಕಾಂಬಿನೇಶನಲ್ಲಿ ಬರಲಿದೆ ಭರ್ಜರಿ ಆಕ್ಷನ್ ಚಿತ್ರ. “ಭರ್ಜರಿ ಗಂಡು” ಚಿತ್ರತಂಡದಿಂದ ಮತ್ತೊಂದು ಹೊಸ ಚಿತ್ರ

Published

on

ತಮ್ಮ ಅಮೋಘ ಅಭಿನಯದ ಮೂಲಕ ಜನಮನಸೂರೆಗೊಳ್ಳುತ್ತಿರುವ ನಟ ಕಿರಣ್ ರಾಜ್ ನಾಯಕನಾಗಿ ನಟಿಸುತ್ತಿರುವ ಹಾಗೂ ಪ್ರಸಿದ್ದ್ ನಿರ್ದೇಶಿಸುತ್ತಿರುವ “ಭರ್ಜರಿ ಗಂಡು” ಚಿತ್ರದ ಚಿತ್ರೀಕರಣ ಪೂರ್ಣವಾಗಿ, ಡಬ್ಬಿಂಗ್ ನಡೆಯುತ್ತಿದೆ. ಬಿಡುಗಡೆಗೂ ಮುನ್ನವೇ ಈ ಚಿತ್ರದ ಬಗ್ಗೆ ಹಾಗೂ ಕಿರಣ್ ರಾಜ್ – ಪ್ರಸಿದ್ದ್ ಕಾಂಬಿನೇಶನ್ ಬಗ್ಗೆ ಉತ್ತಮ ಮಾತುಗಳು ಕೇಳಿ ಬರುತ್ತಿದೆ.

ಇದೇ ಸಂದರ್ಭದಲ್ಲಿ ಇವರಿಬ್ಬರ ಜೋಡಿಯ ಮತ್ತೊಂದು ಭರ್ಜರಿ ಆಕ್ಷನ್ ಓರಿಯೆಂಟೆಡ್ ಚಿತ್ರ ಆರಂಭವಾಗುತ್ತಿದೆ. ಈ ನೂತನ ಚಿತ್ರದ ಸ್ಕ್ರಿಪ್ಟ್ ಪೂಜೆ ಇತ್ತೀಚೆಗೆ ಬಂಡಿಮಹಾಕಾಳಿ ದೇವಸ್ಥಾನದಲ್ಲಿ ನಡೆಯಿತು.
ಚಿತ್ರತಂಡದ ಸದಸ್ಯರು ಪೂಜಾ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

ಪ್ರಸಿದ್ದ್ ಫಿಲಂ ಲಾಂಛನದಲ್ಲಿ “ಭರ್ಜರಿ ಗಂಡು” ಚಿತ್ರ ನಿರ್ಮಾಣವಾಗುತ್ತಿದ್ದು, ಅದೇ ಬ್ಯಾನರ್ ನಲ್ಲಿ ಈ ಚಿತ್ರ ಕೂಡ ನಿರ್ಮಾಣವಾಗಲಿದೆ.

 

 

 

 

ಜುಲೈ ಅಂತ್ಯದಲ್ಲಿ ಅಥವಾ ಆಗಸ್ಟ್ ಮೊದಲ ವಾರದಲ್ಲಿ ಚಿತ್ರೀಕರಣ ಶುರುವಾಗಲಿದೆ.

ಈ ಚಿತ್ರದಲ್ಲಿ ಕಿರಣ್ ರಾಜ್ ಪಕ್ಕಾ ಲೋಕಲ್ ಹುಡುಗನ ಪಾತ್ರದಲ್ಲಿ‌ ಕಾಣಿಸಿಕೊಳ್ಳಲಿದ್ದಾರಂತೆ. ಕಿರಣ್ ರಾಜ್ ಅವರಿಗೆ ನಾಯಕಿಯಾಗಿ ಸುರೇಖ ಅಭಿನಯಿಸಲಿದ್ದಾರೆ.
ಉಳಿದ ತಾರಾಬಳಗದ ಆಯ್ಕೆ ನಡೆಯುತ್ತಿದೆ. ಸದ್ಯದಲ್ಲೇ ಶೀರ್ಷಿಕೆ ಸಹ ಅನಾವರಣಗೊಳ್ಳಲಿದೆ.

ಸುದರ್ಶನ್ ಸುಂದರರಾಜ್ ನಿರ್ಮಿಸುತ್ತಿರುವ ಈ ಚಿತ್ರಕ್ಕೆ ಗುಮ್ಮಿನೇನಿ ವಿಜಯ್ ಸಂಗೀತ ನಿರ್ದೇಶನ, ಕಿಟ್ಟಿ ಕೌಶಿಕ್ ಛಾಯಾಗ್ರಹಣ, ವಿನೋದ್ ಸಾಹಸ ನಿರ್ದೇಶನ ಹಾಗೂ ವೆಂಕಿ ಯುಡಿವಿ ಅವರ ಸಂಕಲನ ಈ ಚಿತ್ರಕ್ಕಿದೆ.

Spread the love

ತಮ್ಮ ಅಮೋಘ ಅಭಿನಯದ ಮೂಲಕ ಜನಮನಸೂರೆಗೊಳ್ಳುತ್ತಿರುವ ನಟ ಕಿರಣ್ ರಾಜ್ ನಾಯಕನಾಗಿ ನಟಿಸುತ್ತಿರುವ ಹಾಗೂ ಪ್ರಸಿದ್ದ್ ನಿರ್ದೇಶಿಸುತ್ತಿರುವ “ಭರ್ಜರಿ ಗಂಡು” ಚಿತ್ರದ ಚಿತ್ರೀಕರಣ ಪೂರ್ಣವಾಗಿ, ಡಬ್ಬಿಂಗ್ ನಡೆಯುತ್ತಿದೆ. ಬಿಡುಗಡೆಗೂ ಮುನ್ನವೇ ಈ ಚಿತ್ರದ ಬಗ್ಗೆ ಹಾಗೂ ಕಿರಣ್ ರಾಜ್ – ಪ್ರಸಿದ್ದ್ ಕಾಂಬಿನೇಶನ್ ಬಗ್ಗೆ ಉತ್ತಮ ಮಾತುಗಳು ಕೇಳಿ ಬರುತ್ತಿದೆ.

ಇದೇ ಸಂದರ್ಭದಲ್ಲಿ ಇವರಿಬ್ಬರ ಜೋಡಿಯ ಮತ್ತೊಂದು ಭರ್ಜರಿ ಆಕ್ಷನ್ ಓರಿಯೆಂಟೆಡ್ ಚಿತ್ರ ಆರಂಭವಾಗುತ್ತಿದೆ. ಈ ನೂತನ ಚಿತ್ರದ ಸ್ಕ್ರಿಪ್ಟ್ ಪೂಜೆ ಇತ್ತೀಚೆಗೆ ಬಂಡಿಮಹಾಕಾಳಿ ದೇವಸ್ಥಾನದಲ್ಲಿ ನಡೆಯಿತು.
ಚಿತ್ರತಂಡದ ಸದಸ್ಯರು ಪೂಜಾ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

ಪ್ರಸಿದ್ದ್ ಫಿಲಂ ಲಾಂಛನದಲ್ಲಿ “ಭರ್ಜರಿ ಗಂಡು” ಚಿತ್ರ ನಿರ್ಮಾಣವಾಗುತ್ತಿದ್ದು, ಅದೇ ಬ್ಯಾನರ್ ನಲ್ಲಿ ಈ ಚಿತ್ರ ಕೂಡ ನಿರ್ಮಾಣವಾಗಲಿದೆ.

 

 

 

 

ಜುಲೈ ಅಂತ್ಯದಲ್ಲಿ ಅಥವಾ ಆಗಸ್ಟ್ ಮೊದಲ ವಾರದಲ್ಲಿ ಚಿತ್ರೀಕರಣ ಶುರುವಾಗಲಿದೆ.

ಈ ಚಿತ್ರದಲ್ಲಿ ಕಿರಣ್ ರಾಜ್ ಪಕ್ಕಾ ಲೋಕಲ್ ಹುಡುಗನ ಪಾತ್ರದಲ್ಲಿ‌ ಕಾಣಿಸಿಕೊಳ್ಳಲಿದ್ದಾರಂತೆ. ಕಿರಣ್ ರಾಜ್ ಅವರಿಗೆ ನಾಯಕಿಯಾಗಿ ಸುರೇಖ ಅಭಿನಯಿಸಲಿದ್ದಾರೆ.
ಉಳಿದ ತಾರಾಬಳಗದ ಆಯ್ಕೆ ನಡೆಯುತ್ತಿದೆ. ಸದ್ಯದಲ್ಲೇ ಶೀರ್ಷಿಕೆ ಸಹ ಅನಾವರಣಗೊಳ್ಳಲಿದೆ.

ಸುದರ್ಶನ್ ಸುಂದರರಾಜ್ ನಿರ್ಮಿಸುತ್ತಿರುವ ಈ ಚಿತ್ರಕ್ಕೆ ಗುಮ್ಮಿನೇನಿ ವಿಜಯ್ ಸಂಗೀತ ನಿರ್ದೇಶನ, ಕಿಟ್ಟಿ ಕೌಶಿಕ್ ಛಾಯಾಗ್ರಹಣ, ವಿನೋದ್ ಸಾಹಸ ನಿರ್ದೇಶನ ಹಾಗೂ ವೆಂಕಿ ಯುಡಿವಿ ಅವರ ಸಂಕಲನ ಈ ಚಿತ್ರಕ್ಕಿದೆ.

Spread the love
Continue Reading
Click to comment

Leave a Reply

Your email address will not be published. Required fields are marked *