Connect with us

Cinema News

ತೆಲುಗಿನ ಮಾಸ್ ಮಹಾರಾಜನಿಗೆ ಹ್ಯಾಟ್ರಿಕ್ ಹೀರೋ ಸಾಥ್…’ಟೈಗರ್ ನಾಗೇಶ್ವರ್ ರಾವ್’ ಸಿನಿಮಾದ ಕನ್ನಡ ಫಸ್ಟ್ ಲುಕ್ ಶಿವಣ್ಣ ವಾಯ್ಸ್

Published

on

ಟಾಲಿವುಡ್ ಮಾಸ್ ಮಹಾರಾಜ ರವಿತೇಜ ನಟಿಸುತ್ತಿರುವ ಚೊಚ್ಚಲ ಪ್ಯಾನ್ ಇಂಡಿಯಾ ಸಿನಿಮಾ ಟೈಗರ್ ನಾಗೇಶ್ವರ್ ರಾವ್ ಫಸ್ಟ್ ಲುಕ್ ರಿಲೀಸ್ ಗೆ ಮುಹೂರ್ತ ಫಿಕ್ಸ್ ಆಗಿದೆ. ಇದೇ 24ರಂದು ಪಂಚ ಭಾಷೆಯಲ್ಲಿ ಅನಾವರಣಗೊಳ್ತಿರುವ ಫಸ್ಟ್ ಲುಕ್ ಕನ್ನಡ ಝಲಕ್ ಗೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಧ್ವನಿ ನೀಡಿದ್ದಾರೆ.

ಕರುನಾಡ ಚಕ್ರವರ್ತಿ ಶಿವಣ್ಣ ತಮ್ಮ ಮ್ಯಾಜಿಕಲ್ ವಾಯ್ಸ್ ಮೂಲಕ ಟೈಗರ್ ನಾಗೇಶ್ವರ್ ರಾವ್ ಪ್ರಪಂಚಕ್ಕೆ ನಿಮ್ಮನ್ನು ಕೊಂಡೊಯ್ಯಲಿದ್ದಾರೆ. ವಂಶಿ ನಿರ್ದೇಶನದಲ್ಲಿ ತಯಾರಾಗಿರುವ ಈ ಸಿನಿಮಾವನ್ನು ಕಾಶ್ಮೀರಿ ಫೈಲ್ಸ್ ಹಾಗೂ ಕಾರ್ತಿಕೇಯ-2 ನಂತಹ ಎರಡು ಬ್ಲಾಕ್ ಬಸ್ಟರ್ ಹಿಟ್ ಚಿತ್ರ ನಿರ್ಮಿಸಿರುವ ಅಭಿಷೇಕ್ ಅರ್ಗವಾಲ್ ತಮ್ಮದೇ ಅಭಿಷೇಕ್ ಅಗವಾಲ್ ಆರ್ಟ್ಸ್ ನಡಿ ಅದ್ಧೂರಿಯಾಗಿ ನಿರ್ಮಿಸಿದ್ದಾರೆ.

 

 

 

70ರ ಕಾಲಘಟ್ಟದ ಹೈದ್ರಾಬಾದ್ ದ ಸ್ಟುವರ್ಟ್ ಪುರಂ ಹಳ್ಳಿಯೊಂದರ ಕುಖ್ಯಾತ ಕಳ್ಳನ ಜೀವನಾಧಾರಿತ ಸಿನಿಮಾ ಇದಾಗಿದ್ದು, ಈ ಹಿಂದಿನ ಎಲ್ಲಾ ಚಿತ್ರಗಳಿಗಿಂತಲೂ ರವಿತೇಜ ಗೆಟಪ್, ಬಾಡಿ ಲಾಗ್ವೇಜ್ ಸಂಪೂರ್ಣವಾಗಿ ಭಿನ್ನವಾಗಿರಲಿದೆ. ನೂಪುರ್ ಸನೋನ್ ಮತ್ತು ಗಾಯತ್ರಿ ಭಾರದ್ವಾಜ್ ನಾಯಕಿಯರಾಗಿ ಮಾಸ್ ಮಹಾರಾಜನಿಗೆ ಸಾಥ್ ಕೊಟ್ಟಿದ್ದಾರೆ. ಆರ್ ಮಧಿ ಛಾಯಾಗ್ರಹಣ, ಶ್ರೀಕಾಂತ್ ವೀಸಾ ಸಂಭಾಷಣೆ, ವಿ ಪ್ರಕಾಶ್ ಕುಮಾರ್ ಸಂಗೀತ ಸಿನಿಮಾಕ್ಕಿದೆ. ಅವಿನಾಶ್ ಕೊಲ್ಲಾ ಕಾರ್ಯಕಾರಿ ನಿರ್ಮಾಪಕರಾಗಿದ್ದು, ಮಯಾಂಕ್ ಸಿಂಘಾನಿಯಾ ಸಹ ನಿರ್ಮಾಣದ ಜವಾಬ್ದಾರಿ ನಿಭಾಯಿಸಿದ್ದಾರೆ.

ದಸರಾ ಹಬ್ಬಕ್ಕೆ ಟೈಗರ್ ನಾಗೇಶ್ವರ್ ರಾವ್ ಬಾಕ್ಸಾಫೀಸ್ ಬೇಟೆಗಿಳಿಯಲಿದ್ದಾರೆ. ಅಂದರೆ ಅಕ್ಟೋಬರ್ 22ರಂದು ವಿಶ್ವಾದ್ಯಂತ ರವಿತೇಜ ಸಿನಿಮಾ ಬೆಳ್ಳಿತೆರೆಗಪ್ಪಳಿಸಲಿದೆ. ದಸರಾ ಹಬ್ಬದ ಸುಸಂದರ್ಭ ಹಾಗೂ ದಸರಾ ರಜೆ ಹಿನ್ನೆಲೆ ಪ್ಲಾನ್ ಮಾಡಿಕೊಂಡು ಪ್ಯಾನ್ ಇಂಡಿಯಾ ಮಟ್ಟದಲ್ಲಿ ಚಿತ್ರ ರಿಲೀಸ್ ಮಾಡಲಾಗ್ತಿದೆ

 

Spread the love

ಟಾಲಿವುಡ್ ಮಾಸ್ ಮಹಾರಾಜ ರವಿತೇಜ ನಟಿಸುತ್ತಿರುವ ಚೊಚ್ಚಲ ಪ್ಯಾನ್ ಇಂಡಿಯಾ ಸಿನಿಮಾ ಟೈಗರ್ ನಾಗೇಶ್ವರ್ ರಾವ್ ಫಸ್ಟ್ ಲುಕ್ ರಿಲೀಸ್ ಗೆ ಮುಹೂರ್ತ ಫಿಕ್ಸ್ ಆಗಿದೆ. ಇದೇ 24ರಂದು ಪಂಚ ಭಾಷೆಯಲ್ಲಿ ಅನಾವರಣಗೊಳ್ತಿರುವ ಫಸ್ಟ್ ಲುಕ್ ಕನ್ನಡ ಝಲಕ್ ಗೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಧ್ವನಿ ನೀಡಿದ್ದಾರೆ.

ಕರುನಾಡ ಚಕ್ರವರ್ತಿ ಶಿವಣ್ಣ ತಮ್ಮ ಮ್ಯಾಜಿಕಲ್ ವಾಯ್ಸ್ ಮೂಲಕ ಟೈಗರ್ ನಾಗೇಶ್ವರ್ ರಾವ್ ಪ್ರಪಂಚಕ್ಕೆ ನಿಮ್ಮನ್ನು ಕೊಂಡೊಯ್ಯಲಿದ್ದಾರೆ. ವಂಶಿ ನಿರ್ದೇಶನದಲ್ಲಿ ತಯಾರಾಗಿರುವ ಈ ಸಿನಿಮಾವನ್ನು ಕಾಶ್ಮೀರಿ ಫೈಲ್ಸ್ ಹಾಗೂ ಕಾರ್ತಿಕೇಯ-2 ನಂತಹ ಎರಡು ಬ್ಲಾಕ್ ಬಸ್ಟರ್ ಹಿಟ್ ಚಿತ್ರ ನಿರ್ಮಿಸಿರುವ ಅಭಿಷೇಕ್ ಅರ್ಗವಾಲ್ ತಮ್ಮದೇ ಅಭಿಷೇಕ್ ಅಗವಾಲ್ ಆರ್ಟ್ಸ್ ನಡಿ ಅದ್ಧೂರಿಯಾಗಿ ನಿರ್ಮಿಸಿದ್ದಾರೆ.

 

 

 

70ರ ಕಾಲಘಟ್ಟದ ಹೈದ್ರಾಬಾದ್ ದ ಸ್ಟುವರ್ಟ್ ಪುರಂ ಹಳ್ಳಿಯೊಂದರ ಕುಖ್ಯಾತ ಕಳ್ಳನ ಜೀವನಾಧಾರಿತ ಸಿನಿಮಾ ಇದಾಗಿದ್ದು, ಈ ಹಿಂದಿನ ಎಲ್ಲಾ ಚಿತ್ರಗಳಿಗಿಂತಲೂ ರವಿತೇಜ ಗೆಟಪ್, ಬಾಡಿ ಲಾಗ್ವೇಜ್ ಸಂಪೂರ್ಣವಾಗಿ ಭಿನ್ನವಾಗಿರಲಿದೆ. ನೂಪುರ್ ಸನೋನ್ ಮತ್ತು ಗಾಯತ್ರಿ ಭಾರದ್ವಾಜ್ ನಾಯಕಿಯರಾಗಿ ಮಾಸ್ ಮಹಾರಾಜನಿಗೆ ಸಾಥ್ ಕೊಟ್ಟಿದ್ದಾರೆ. ಆರ್ ಮಧಿ ಛಾಯಾಗ್ರಹಣ, ಶ್ರೀಕಾಂತ್ ವೀಸಾ ಸಂಭಾಷಣೆ, ವಿ ಪ್ರಕಾಶ್ ಕುಮಾರ್ ಸಂಗೀತ ಸಿನಿಮಾಕ್ಕಿದೆ. ಅವಿನಾಶ್ ಕೊಲ್ಲಾ ಕಾರ್ಯಕಾರಿ ನಿರ್ಮಾಪಕರಾಗಿದ್ದು, ಮಯಾಂಕ್ ಸಿಂಘಾನಿಯಾ ಸಹ ನಿರ್ಮಾಣದ ಜವಾಬ್ದಾರಿ ನಿಭಾಯಿಸಿದ್ದಾರೆ.

ದಸರಾ ಹಬ್ಬಕ್ಕೆ ಟೈಗರ್ ನಾಗೇಶ್ವರ್ ರಾವ್ ಬಾಕ್ಸಾಫೀಸ್ ಬೇಟೆಗಿಳಿಯಲಿದ್ದಾರೆ. ಅಂದರೆ ಅಕ್ಟೋಬರ್ 22ರಂದು ವಿಶ್ವಾದ್ಯಂತ ರವಿತೇಜ ಸಿನಿಮಾ ಬೆಳ್ಳಿತೆರೆಗಪ್ಪಳಿಸಲಿದೆ. ದಸರಾ ಹಬ್ಬದ ಸುಸಂದರ್ಭ ಹಾಗೂ ದಸರಾ ರಜೆ ಹಿನ್ನೆಲೆ ಪ್ಲಾನ್ ಮಾಡಿಕೊಂಡು ಪ್ಯಾನ್ ಇಂಡಿಯಾ ಮಟ್ಟದಲ್ಲಿ ಚಿತ್ರ ರಿಲೀಸ್ ಮಾಡಲಾಗ್ತಿದೆ

 

Spread the love
Continue Reading
Click to comment

Leave a Reply

Your email address will not be published. Required fields are marked *