Connect with us

Cinema News

ಗಣ್ಯರ ಸಮ್ಮುಖದಲ್ಲಿ “ದಂಡಿ” ಹಾಡುಗಳ ಬಿಡುಗಡೆ.

Published

on

ಕಲ್ಯಾಣಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಉಷಾರಾಣಿ. ಎಸ್.ಸಿ ಅವರು ನಿರ್ಮಿಸಿರುವ, ವಿಶಾಲ್ ರಾಜ್ ನಿರ್ದೇಶಿಸಿರುವ “ದಂಡಿ” ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು.

ಆದಿಚುಂಚನಗಿರಿ ಮಠದ ಶ್ರೀ ಸೌಮ್ಯನಾಥ ಸ್ವಾಮೀಜಿ, ಮೇಜರ್ ಸಿ.ಆರ್.ರಮೇಶ್, ಎನ್.ಮುನಿರಾಜುಗೌಡ ಮುಂತಾದ ಗಣ್ಯರ ಸಮ್ಮುಖದಲ್ಲಿ ಚಿತ್ರದ ಹಾಡುಗಳು ಲೋಕಾರ್ಪಣೆಯಾದವು.

ಪೂಜ್ಯ ಶ್ರೀಗಳು ತಮ್ಮ ಹಿತನುಡಿಗಳ ಮೂಲಕ ಚಿತ್ರಕ್ಕೆ ಶುಭ ಹಾರೈಸಿದರು. ಉಳಿದ ಗಣ್ಯರು ಚಿತ್ರದ ಬಗ್ಗೆ ಪ್ರಶಂಸೆಯ ಮಾತುಗಳಾಡಿದರು.

 

 

 

 

ಪ್ರೊಫೆಸರ್ ರಾಜಶೇಖರ ಮಠಪತಿ ಅವರ ಕಾದಂಬರಿ ಆಧರಿಸಿ ಈ ಚಿತ್ರ ನಿರ್ಮಾಣವಾಗಿದೆ. 1904 ರಿಂದ 1942 ರವರೆಗೆ ದೇಶದಲ್ಲಿ ನಡೆದ ಚಳುವಳಿಗಳು ನಮ್ಮ ಚಿತ್ರಕ್ಕೆ ಸ್ಪೂರ್ತಿಯಾಗಿದೆ. ಆದರೆ “ದಂಡಿ” ಚಳುವಳಿಯನ್ನು ಕೇಂದ್ರಿಕರಿಸಲಾಗಿದೆ. ಗಾಂಧಿಯವರ ಸಾರಥ್ಯದಲ್ಲಿ “ದಂಡಿ” ಸತ್ಯಾಗ್ರಹ ನಡೆಯುತ್ತಿದಾಗಲೇ, ನಮ್ಮ ಉತ್ತರ ಕನ್ನಡದಲ್ಲೂ ಹೋರಾಟ ಆರಂಭವಾಯಿತು. ಅದನ್ನು ಚಿತ್ರದಲ್ಲಿ ತೋರಿಸಲಾಗಿದೆ. ಈ ಬಾರಿಯ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ನಮ್ಮ ಚಿತ್ರ ಪ್ರದರ್ಶನಗೊಂಡು ಪ್ರಶಸ್ತಿ ಪಡೆದಿರುವುದು ಖುಷಿಯ ವಿಚಾರವೆಂದರು ನಿರ್ದೇಶಕ ವಿಶಾಲ್ ರಾಜ್.

ನಾನು ವಿಶಾಲ್ ರಾಜ್ ಅವರ ಹಿಂದಿನ ಮೂರು ಚಿತ್ರಗಳಲ್ಲಿ ಅಭಿನಯಿಸಿದ್ದೇನೆ. ರಾಷ್ಟ್ರ ಪ್ರಶಸ್ತಿ ಪುರಸ್ಕೃತ ತಾರಾ ಅವರೊಡನೆ ಅಭಿನಯಿಸಿದು ಸಂತೋಷ. ಈ ರೀತಿಯ ವಿಭಿನ್ನ ಕಥೆಯುಳ್ಳ ಚಿತ್ರಗಳನ್ನು ವಿಶಾಲ್ ರಾಜ್ ಹೆಚ್ಚು ನಿರ್ದೇಶಿಸಲಿ. ಚಿತ್ರತಂಡಕ್ಕೆ ಒಳ್ಳೆಯದಾಗಲಿ ಎಂದರು ನಟ ಸುಚೀಂದ್ರ ಪ್ರಸಾದ್.

 

 

 

 

 

ಈ ಚಿತ್ರದಲ್ಲಿ ಅಭಿನಯಿಸಿದ್ದಕ್ಕೆ ಸಂತಸವಾಗಿದೆ. ನಮ್ಮ ಚಿತ್ರಕ್ಕೆ ಈ ಬಾರಿ ಚಲನಚಿತ್ರೋತ್ಸವದಲ್ಲಿ ಪ್ರಶಸ್ತಿ ಕೂಡ ಬಂದಿದೆ. ಇಂತಹ ಚಿತ್ರವನ್ನು ನಿರ್ದೇಶಿಸಿರುವುದಕ್ಕೆ ವಿಶಾಲ್ ರಾಜ್ ಅವರನ್ನು ವಿಶೇಷವಾಗಿ ಅಭಿನಂದಿಸುತ್ತೇನೆ ಎಂದರು ನಟಿ ತಾರಾ.

ಕಥೆ ಬರೆದಿರುವ ರಾಗಂ(ರಾಜಶೇಖರ ಮಠಪತಿ) ಸವಿಸ್ತಾರವಾಗಿ ಕಾದಂಬರಿ ಬಗ್ಗೆ ಹಾಗೂ ಚಿತ್ರದ ಬಗ್ಗೆ
ಮಾಹಿತಿ ನೀಡಿದರು.

ಸಂಗೀತ ನೀಡಿರುವ ರಾಮ್ ಕ್ರಿಶ್, ಛಾಯಾಗ್ರಾಹಕ ರಮೇಶ್ ಬಾಬು, ನಾಯಕ ಯುವಾನ್ ದೇವ್, ನಾಯಕಿ ಶಾಲಿನಿ ಭಟ್ ಹಾಗೂ ನಿರ್ಮಾಪಕಿ, ನಟಿ ಉಷಾರಾಣಿ “ದಂಡಿ” ಯ ಬಗ್ಗೆ ಅನುಭವದ ಮಾತುಗಳಾಡಿದರು.

Spread the love

ಕಲ್ಯಾಣಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಉಷಾರಾಣಿ. ಎಸ್.ಸಿ ಅವರು ನಿರ್ಮಿಸಿರುವ, ವಿಶಾಲ್ ರಾಜ್ ನಿರ್ದೇಶಿಸಿರುವ “ದಂಡಿ” ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು.

ಆದಿಚುಂಚನಗಿರಿ ಮಠದ ಶ್ರೀ ಸೌಮ್ಯನಾಥ ಸ್ವಾಮೀಜಿ, ಮೇಜರ್ ಸಿ.ಆರ್.ರಮೇಶ್, ಎನ್.ಮುನಿರಾಜುಗೌಡ ಮುಂತಾದ ಗಣ್ಯರ ಸಮ್ಮುಖದಲ್ಲಿ ಚಿತ್ರದ ಹಾಡುಗಳು ಲೋಕಾರ್ಪಣೆಯಾದವು.

ಪೂಜ್ಯ ಶ್ರೀಗಳು ತಮ್ಮ ಹಿತನುಡಿಗಳ ಮೂಲಕ ಚಿತ್ರಕ್ಕೆ ಶುಭ ಹಾರೈಸಿದರು. ಉಳಿದ ಗಣ್ಯರು ಚಿತ್ರದ ಬಗ್ಗೆ ಪ್ರಶಂಸೆಯ ಮಾತುಗಳಾಡಿದರು.

 

 

 

 

ಪ್ರೊಫೆಸರ್ ರಾಜಶೇಖರ ಮಠಪತಿ ಅವರ ಕಾದಂಬರಿ ಆಧರಿಸಿ ಈ ಚಿತ್ರ ನಿರ್ಮಾಣವಾಗಿದೆ. 1904 ರಿಂದ 1942 ರವರೆಗೆ ದೇಶದಲ್ಲಿ ನಡೆದ ಚಳುವಳಿಗಳು ನಮ್ಮ ಚಿತ್ರಕ್ಕೆ ಸ್ಪೂರ್ತಿಯಾಗಿದೆ. ಆದರೆ “ದಂಡಿ” ಚಳುವಳಿಯನ್ನು ಕೇಂದ್ರಿಕರಿಸಲಾಗಿದೆ. ಗಾಂಧಿಯವರ ಸಾರಥ್ಯದಲ್ಲಿ “ದಂಡಿ” ಸತ್ಯಾಗ್ರಹ ನಡೆಯುತ್ತಿದಾಗಲೇ, ನಮ್ಮ ಉತ್ತರ ಕನ್ನಡದಲ್ಲೂ ಹೋರಾಟ ಆರಂಭವಾಯಿತು. ಅದನ್ನು ಚಿತ್ರದಲ್ಲಿ ತೋರಿಸಲಾಗಿದೆ. ಈ ಬಾರಿಯ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ನಮ್ಮ ಚಿತ್ರ ಪ್ರದರ್ಶನಗೊಂಡು ಪ್ರಶಸ್ತಿ ಪಡೆದಿರುವುದು ಖುಷಿಯ ವಿಚಾರವೆಂದರು ನಿರ್ದೇಶಕ ವಿಶಾಲ್ ರಾಜ್.

ನಾನು ವಿಶಾಲ್ ರಾಜ್ ಅವರ ಹಿಂದಿನ ಮೂರು ಚಿತ್ರಗಳಲ್ಲಿ ಅಭಿನಯಿಸಿದ್ದೇನೆ. ರಾಷ್ಟ್ರ ಪ್ರಶಸ್ತಿ ಪುರಸ್ಕೃತ ತಾರಾ ಅವರೊಡನೆ ಅಭಿನಯಿಸಿದು ಸಂತೋಷ. ಈ ರೀತಿಯ ವಿಭಿನ್ನ ಕಥೆಯುಳ್ಳ ಚಿತ್ರಗಳನ್ನು ವಿಶಾಲ್ ರಾಜ್ ಹೆಚ್ಚು ನಿರ್ದೇಶಿಸಲಿ. ಚಿತ್ರತಂಡಕ್ಕೆ ಒಳ್ಳೆಯದಾಗಲಿ ಎಂದರು ನಟ ಸುಚೀಂದ್ರ ಪ್ರಸಾದ್.

 

 

 

 

 

ಈ ಚಿತ್ರದಲ್ಲಿ ಅಭಿನಯಿಸಿದ್ದಕ್ಕೆ ಸಂತಸವಾಗಿದೆ. ನಮ್ಮ ಚಿತ್ರಕ್ಕೆ ಈ ಬಾರಿ ಚಲನಚಿತ್ರೋತ್ಸವದಲ್ಲಿ ಪ್ರಶಸ್ತಿ ಕೂಡ ಬಂದಿದೆ. ಇಂತಹ ಚಿತ್ರವನ್ನು ನಿರ್ದೇಶಿಸಿರುವುದಕ್ಕೆ ವಿಶಾಲ್ ರಾಜ್ ಅವರನ್ನು ವಿಶೇಷವಾಗಿ ಅಭಿನಂದಿಸುತ್ತೇನೆ ಎಂದರು ನಟಿ ತಾರಾ.

ಕಥೆ ಬರೆದಿರುವ ರಾಗಂ(ರಾಜಶೇಖರ ಮಠಪತಿ) ಸವಿಸ್ತಾರವಾಗಿ ಕಾದಂಬರಿ ಬಗ್ಗೆ ಹಾಗೂ ಚಿತ್ರದ ಬಗ್ಗೆ
ಮಾಹಿತಿ ನೀಡಿದರು.

ಸಂಗೀತ ನೀಡಿರುವ ರಾಮ್ ಕ್ರಿಶ್, ಛಾಯಾಗ್ರಾಹಕ ರಮೇಶ್ ಬಾಬು, ನಾಯಕ ಯುವಾನ್ ದೇವ್, ನಾಯಕಿ ಶಾಲಿನಿ ಭಟ್ ಹಾಗೂ ನಿರ್ಮಾಪಕಿ, ನಟಿ ಉಷಾರಾಣಿ “ದಂಡಿ” ಯ ಬಗ್ಗೆ ಅನುಭವದ ಮಾತುಗಳಾಡಿದರು.

Spread the love
Continue Reading
Click to comment

Leave a Reply

Your email address will not be published. Required fields are marked *