Connect with us

Cinema News

ಕಾಗದ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಮಾಡಿದ ಲವ್ ಮಾಕ್ಟೇಲ್ ಜೋಡಿ…ಬಾಲನಟಿ ಅಂಕಿತಾ-ಆದಿತ್ಯ ಚೊಚ್ಚಲ ಚಿತ್ರ

Published

on

ಈ ಹಿಂದೆ ಆ್ಯಪಲ್ ಕೇಕ್ ಎಂಬ ಸಿನಿಮಾ ನಿರ್ದೇಶಿಸಿದ್ದ ರಂಜಿತ್ ಕುಮಾರ್ ಗೌಡ ಎರಡನೇ ಹೆಜ್ಜೆ ಕಾಗದ. ಮದರಂಗಿ, ವಾಸ್ಕೋ ಡಿಗಾಮ ಸೇರಿದಂತೆ ಹಲವರು ಚಿತ್ರಗಳಲ್ಲಿ ಕೋ ಡೈರೆಕ್ಟರ್ ಆಗಿ ಕೆಲಸ ಮಾಡಿದ್ದ ರಂಜಿತ್ ಆ್ಯಪಲ್ ಕೇಕ್ ಮೂಲಕ ನಿರ್ದೇಶಕರಾಗಿ ಬಡ್ತಿ ಪಡೆದಿದ್ದರು. ಈಗ ಅವರ ನಿರ್ದೇಶನದ ಎರಡನೇ ಸಿನಿಮಾ ಕಾಗದ ಫಸ್ಟ್ ಲುಕ್ ಬಿಡುಗಡೆಯಾಗಿದೆ. ಸ್ಯಾಂಡಲ್ ವುಡ್ ಕ್ಯೂಟ್ ಕಪಲ್ ಮಿಲನಾ ನಾಗರಾಜ್ ಹಾಗೂ ಡಾರ್ಲಿಂಗ್ ಕೃಷ್ಣ ಫಸ್ಟ್ ಲುಕ್ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭಾಶಯ ಕೋರಿದ್ದಾರೆ.

 

ಕಾಗದ ಸಿನಿಮಾ ಮೂಲಕ ಬಾಲನಟಿ ಅಂಕಿತಾ ನಾಯಕಿಯಾಗಿ, ಆದಿತ್ಯ ನಾಯಕನಾಗಿ ಸ್ಯಾಂಡಲ್ ವುಡ್ ಗೆ ಪದಾರ್ಪಣೆ ಮಾಡಿದ್ದಾರೆ. ಮಫ್ತಿ ಖ್ಯಾತಿಯ ಬಾಲರಾಜವಾಡಿ, ನೇಹಾ ಪಾಟೀಲ್, ಶಿವಮಂಜು, ಅಶ್ವತ್ಥ್ ನೀನಾಸಂ, ಗೌತಮ್ ತಾರಾಬಳಗದಲ್ಲಿದ್ದಾರೆ. ಕಾಗದ ಪ್ರೇಮಕಥಾಹಂದರದ ಚಿತ್ರ. 2005ರ ಸಮಯದಲ್ಲಿ ನಡೆಯುವ ಕಾಲ್ಪನಿಕ ಕಥೆ. ಮೊಬೈಲ್ ಇಲ್ಲದ ಕಾಲಘಟ್ಟದಲ್ಲಿ ಕಾಗದ ಎಷ್ಟು ಮುಖ್ಯ ಪಾತ್ರ ವಹಿಸಿದೆ ಅನ್ನೋದು ಚಿತ್ರದ ಕಂಟೆಂಟ್.

 

ರಂಜಿತ್ ಕುಮಾರ್ ಗೌಡ ಕಥೆ ಚಿತ್ರಕಥೆ ಸಂಭಾಷಣೆ ಬರೆದು ನಿರ್ದೇಶಿಸುತ್ತಿರುವ ಕಾಗದ ಸಿನಿಮಾಗೆ ಅರುಣ್ ಕುಮಾರ್ ಎ ಬಂಡವಾಳ ಹೂಡಿದ್ದಾರೆ. ಅಮ್ಮ ಸಿನಿ ಕ್ರಿಯೇಷನ್ ನಡಿ ಸಿನಿಮಾ ಮೂಡಿ ಬರಲಿದ್ದು, ಇದೇ ನಿರ್ಮಾಣ ಸಂಸ್ಥೆಯಡಿ ಈ ಹಿಂದೆ ರಗಡ್ ಎಂಬ ಚಿತ್ರ ನಿರ್ಮಾಣವಾಗಿತ್ತು.

ಕಾಗದ ಸಿನಿಮಾದ ಬಹುತೇಕ ಶೂಟಿಂಗ್ ಮುಕ್ತಾಯಗೊಂಡಿದ್ದು, ಒಂದು ಹಾಡಿನ ಚಿತ್ರೀಕರಣವಷ್ಟೇ ಬಾಕಿ ಇದೆ. ವೀನಸ್ ನಾಗರಾಜ್ ಮೂರ್ತಿ ಛಾಯಾಗ್ರಹಣ, ಎಸ್ ಪ್ರದೀಪ್ ವರ್ಮಾ ಸಂಗೀತ, ಪವನ್ ಗೌಡ ಸಂಕಲನ, ಭೂಷಣ್ ಕೊರಿಯೋಗ್ರಫಿ ಸಿನಿಮಾಕ್ಕಿದೆ. ಬೇಲೂರು, ಮೂಡಿಗೆರೆ ಭಾಗದಲ್ಲಿ ಕಾಗದ ಸಿನಿಮಾದ ಚಿತ್ರೀಕರದ ಮಾಡಲಾಗಿದೆ.

Spread the love

ಈ ಹಿಂದೆ ಆ್ಯಪಲ್ ಕೇಕ್ ಎಂಬ ಸಿನಿಮಾ ನಿರ್ದೇಶಿಸಿದ್ದ ರಂಜಿತ್ ಕುಮಾರ್ ಗೌಡ ಎರಡನೇ ಹೆಜ್ಜೆ ಕಾಗದ. ಮದರಂಗಿ, ವಾಸ್ಕೋ ಡಿಗಾಮ ಸೇರಿದಂತೆ ಹಲವರು ಚಿತ್ರಗಳಲ್ಲಿ ಕೋ ಡೈರೆಕ್ಟರ್ ಆಗಿ ಕೆಲಸ ಮಾಡಿದ್ದ ರಂಜಿತ್ ಆ್ಯಪಲ್ ಕೇಕ್ ಮೂಲಕ ನಿರ್ದೇಶಕರಾಗಿ ಬಡ್ತಿ ಪಡೆದಿದ್ದರು. ಈಗ ಅವರ ನಿರ್ದೇಶನದ ಎರಡನೇ ಸಿನಿಮಾ ಕಾಗದ ಫಸ್ಟ್ ಲುಕ್ ಬಿಡುಗಡೆಯಾಗಿದೆ. ಸ್ಯಾಂಡಲ್ ವುಡ್ ಕ್ಯೂಟ್ ಕಪಲ್ ಮಿಲನಾ ನಾಗರಾಜ್ ಹಾಗೂ ಡಾರ್ಲಿಂಗ್ ಕೃಷ್ಣ ಫಸ್ಟ್ ಲುಕ್ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭಾಶಯ ಕೋರಿದ್ದಾರೆ.

 

ಕಾಗದ ಸಿನಿಮಾ ಮೂಲಕ ಬಾಲನಟಿ ಅಂಕಿತಾ ನಾಯಕಿಯಾಗಿ, ಆದಿತ್ಯ ನಾಯಕನಾಗಿ ಸ್ಯಾಂಡಲ್ ವುಡ್ ಗೆ ಪದಾರ್ಪಣೆ ಮಾಡಿದ್ದಾರೆ. ಮಫ್ತಿ ಖ್ಯಾತಿಯ ಬಾಲರಾಜವಾಡಿ, ನೇಹಾ ಪಾಟೀಲ್, ಶಿವಮಂಜು, ಅಶ್ವತ್ಥ್ ನೀನಾಸಂ, ಗೌತಮ್ ತಾರಾಬಳಗದಲ್ಲಿದ್ದಾರೆ. ಕಾಗದ ಪ್ರೇಮಕಥಾಹಂದರದ ಚಿತ್ರ. 2005ರ ಸಮಯದಲ್ಲಿ ನಡೆಯುವ ಕಾಲ್ಪನಿಕ ಕಥೆ. ಮೊಬೈಲ್ ಇಲ್ಲದ ಕಾಲಘಟ್ಟದಲ್ಲಿ ಕಾಗದ ಎಷ್ಟು ಮುಖ್ಯ ಪಾತ್ರ ವಹಿಸಿದೆ ಅನ್ನೋದು ಚಿತ್ರದ ಕಂಟೆಂಟ್.

 

ರಂಜಿತ್ ಕುಮಾರ್ ಗೌಡ ಕಥೆ ಚಿತ್ರಕಥೆ ಸಂಭಾಷಣೆ ಬರೆದು ನಿರ್ದೇಶಿಸುತ್ತಿರುವ ಕಾಗದ ಸಿನಿಮಾಗೆ ಅರುಣ್ ಕುಮಾರ್ ಎ ಬಂಡವಾಳ ಹೂಡಿದ್ದಾರೆ. ಅಮ್ಮ ಸಿನಿ ಕ್ರಿಯೇಷನ್ ನಡಿ ಸಿನಿಮಾ ಮೂಡಿ ಬರಲಿದ್ದು, ಇದೇ ನಿರ್ಮಾಣ ಸಂಸ್ಥೆಯಡಿ ಈ ಹಿಂದೆ ರಗಡ್ ಎಂಬ ಚಿತ್ರ ನಿರ್ಮಾಣವಾಗಿತ್ತು.

ಕಾಗದ ಸಿನಿಮಾದ ಬಹುತೇಕ ಶೂಟಿಂಗ್ ಮುಕ್ತಾಯಗೊಂಡಿದ್ದು, ಒಂದು ಹಾಡಿನ ಚಿತ್ರೀಕರಣವಷ್ಟೇ ಬಾಕಿ ಇದೆ. ವೀನಸ್ ನಾಗರಾಜ್ ಮೂರ್ತಿ ಛಾಯಾಗ್ರಹಣ, ಎಸ್ ಪ್ರದೀಪ್ ವರ್ಮಾ ಸಂಗೀತ, ಪವನ್ ಗೌಡ ಸಂಕಲನ, ಭೂಷಣ್ ಕೊರಿಯೋಗ್ರಫಿ ಸಿನಿಮಾಕ್ಕಿದೆ. ಬೇಲೂರು, ಮೂಡಿಗೆರೆ ಭಾಗದಲ್ಲಿ ಕಾಗದ ಸಿನಿಮಾದ ಚಿತ್ರೀಕರದ ಮಾಡಲಾಗಿದೆ.

Spread the love
Continue Reading
Click to comment

Leave a Reply

Your email address will not be published. Required fields are marked *