Cinema News

ಸಖತಾಗಿದೆ “ಸಪ್ಲೇಯರ್ ಶಂಕರ” ಚಿತ್ರದ ಪ್ರೇಮಗೀತೆ .

Published

on

ತ್ರಿನೇತ್ರ ಫಿಲಂಸ್ ಲಾಂಛನದಲ್ಲಿ ಎಂ ಚಂದ್ರಶೇಖರ್ ಹಾಗೂ ಎಂ.ನಾಗೇಂದ್ರ ಸಿಂಗ್ ನಿರ್ಮಿಸಿರುವ ಹಾಗೂ ರಂಜಿತ್ ನಿರ್ದೇಶನದಲ್ಲಿ ನಿಶ್ಚಿತ್ ಕರೋಡಿ ನಾಯಕನಾಗಿ ನಟಿಸಿರುವ “ಸಪ್ಲೇಯರ್ ಶಂಕರ” ಚಿತ್ರದ ಎರಡನೇ ಹಾಡು ಆನಂದ್ ಆಡಿಯೋ ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಿದೆ.

ಪ್ರಮೋದ್ ಮರವಂತೆ ಬರೆದಿರುವ “ಮಾಡೊ ಕೆಲಸವ ನೀನು ಮರೆಸಿದೆ” ಎಂಬ ಈ ಪ್ರೇಮಗೀತೆ ನಕುಲ್ ಅಭಯಂಕರ್ ಹಾಗೂ ಐಶ್ವರ್ಯ ರಂಗರಾಜನ್ ಅವರ ಕಂಠದಲ್ಲಿ ಸುಮಧುರವಾಗಿ ಮೂಡಿಬಂದಿದ್ದು, ಆರ್ ಬಿ ಭರತ್ ಸಂಗೀತ ನೀಡಿದ್ದಾರೆ. ಹಾಡು ಬಿಡುಗಡೆಯಾದ ತಕ್ಷಣದಿಂದಲೇ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ.

“ಸಪ್ಲೇಯರ್ ಶಂಕರ” ಬಾರ್ ಸಪ್ಲೇಯರ್ ಒಬ್ಬನ ಸುತ್ತ ನಡೆಯುವ ಕಥೆಯಾಗಿದೆ. “ಗಂಟು ಮೂಟೆ” ಮತ್ತು “ಟಾಮ್ & ಜೆರ್ರಿ” ಚಿತ್ರಗಳ ಮೂಲಕ ಜನಪ್ರಿರಾಗಿರುವ ನಿಶ್ಚಿತ್ ಕರೋಡಿ ಈ ಚಿತ್ರದಲ್ಲಿ “ಸಪ್ಲೇಯರ್ ಶಂಕರ” ನಾಗಿ ಕಾಣಿಸಿಕೊಂಡಿದ್ದಾರೆ. ದೀಪಿಕಾ ಆರಾಧ್ಯ ಈ ಚಿತ್ರದ ನಾಯಕಿ. ಗೋಪಾಲಕೃಷ್ಣ ದೇಶಪಾಂಡೆ, ನವೀನ್ ಪಡೀಲ್, ಜ್ಯೋತಿ ರೈ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ನಿರ್ದೇಶಕ ರಂಜಿತ್ ಅವರೆ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ. ಲವ್, ಕಾಮಿಡಿ, ತಾಯಿ-ಮಗನ ಸೆಂಟಿಮೆಂಟ್, ಬಾರ್ ಸಪ್ಲೇಯರ್ ಜೀವನದ ಜೊತೆಗೆ ಸಸ್ಪೆನ್ ಥ್ರಿಲ್ಲರ್ ಕಥಾಹಂದರವನ್ನು ಈ ಚಿತ್ರ ಒಳಗೊಂಡಿದೆ. ಸತೀಶ್ ಕುಮಾರ್ ಛಾಯಾಗ್ರಹಣ , ಸತೀಶ್ ಚಂದ್ರಯ್ಯ ಅವರ ಸಂಕಲನ ಹಾಗೂ ಬಾಲಾಜಿ ಅವರ ಕಲಾ ನಿರ್ದೇಶನ “ಸಪ್ಲೇಯರ್ ಶಂಕರ” ಚಿತ್ರಕ್ಕಿದೆ.

ಈಗಾಗಲೇ ಚಿತ್ರೀಕರಣ ಮುಗಿಸಿರುವ “ಸಪ್ಲೇಯರ್ ಶಂಕರ”, ಪೋಸ್ಟ್ ಪ್ರೊಡಕ್ಷನ್ ವರ್ಕ್ ನಲ್ಲಿ ಬ್ಯುಸಿಯಾಗಿದ್ದಾನೆ. ಈ ವರ್ಷದ ಕೊನೆಗೆ ತೆರೆಯ ಮೇಲೆ ರಾರಾಜಿಸಲಿದ್ದಾನೆ.

Spread the love

Copyright © 2019 PopcornKannada.com