Connect with us

Cinema News

ಮೇ 22ಕ್ಕೆ ತೆರೆಗೆ ಬರುತ್ತಿದೆ ಸುನೀಲ್ ಕುಮಾರ್ ನಿರ್ದೇಶನದ “ಮಕ್ಕಳ ಸೈನ್ಯೆ”

Published

on

ಸಂಕಲನಕಾರರಾಗಿ ಗುರುತಿಸಿಕೊಂಡಿರುವ ಎಸ್.ಕೆ. ಸುನೀಲ್ ಕುಮಾರ್ ಅವರು ಮೊದಲ ಬಾರಿಗೆ ನಿರ್ದೇಶನ ಮಾಡಿರುವ “ಮಕ್ಕಳ ಸೈನ್ಯೆ” ಚಿತ್ರ ಮೇ 22ರಂದು ತೆರೆಗೆ ಬರಲು ಸಜ್ಜಾಗಿದೆ. ಈ ಕುರಿತು ಮಾಹಿತಿ ಹಂಚಿಕೊಳ್ಳಲು ಆಯೋಜಿಸಲಾದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿತು.

 

ಎಪ್ಪತ್ತರ ದಶಕದ ಜನಪ್ರಿಯ “ಸಿಂಹದ ಮರಿ ಸೈನ್ಯ” ಚಿತ್ರದ ಬಳಿಕ ಅದೇ ಮಾದರಿಯ ಮಕ್ಕಳ ಚಿತ್ರಗಳು ವಿರಳವಾಗಿದ್ದವು. ಇದೀಗ “ಮಕ್ಕಳ ಸೈನ್ಯೆ” ಆ ಕೊರತೆಯನ್ನು ನೀಗಿಸುವ ಪ್ರಯತ್ನವಾಗಿದೆ. ಚಿತ್ರದಲ್ಲಿ ಸ್ನೇಹ, ಸಾಹಸ, ತಂದೆ-ಮಗಳ ಬಾಂಧವ್ಯ ಹಾಗೂ ಸನಾತನ ಮೌಲ್ಯಗಳ ಸಂಯೋಜನೆ ಇದೆ. ಮೊದಲ ಬಾರಿಗೆ ನಟಿಸಿರುವ ಮಕ್ಕಳು ಅದ್ಭುತವಾಗಿ ಅಭಿನಯಿಸಿದ್ದಾರೆ ಎಂದು ನಿರ್ದೇಶಕರು ತಿಳಿಸಿದರು.

 

 

 

 

 

 

ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆಯ ಅಕ್ಕಿ ಹೆಬ್ಬಾಳಿನಲ್ಲಿ ಚಿತ್ರೀಕರಣ ನಡೆದಿದ್ದು, ಹಿರಿಯ ಸಾಹಿತಿ ದೊಡ್ಡರಂಗೇ ಗೌಡ ಅವರ ಗೀತರಚನೆ ಹಾಗೂ ಸನ್ನಿರಾಜ್ ಅವರ ಸಂಗೀತ ಚಿತ್ರಕ್ಕೆ ಮತ್ತಷ್ಟು ಮೆರುಗು ನೀಡಿದೆ. ಮಕ್ಕಳ ಚಿತ್ರವಾದರೂ, ಕಮರ್ಷಿಯಲ್ ಸಿನಿಮಾಗಳಿಗೆ ಸಮಾನವಾಗಿ ನಿರ್ಮಾಣವಾಗಿದೆ.

 

ಚಿತ್ರಕ್ಕೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆಗಳನ್ನು ಸುನೀಲ್ ಕುಮಾರ್ ಸ್ವತಃ ಬರೆದಿದ್ದು, ಮುನಿಸ್ವಾಮಿ ನಿರ್ಮಾಣ ಮಾಡಿದ್ದಾರೆ. ಸಂಗೀತ ಸಹ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ. “ಸವಾಲಿಗೆ ಸವಾಲ್” ಎಂಬ ಅಡಿಬರಹದೊಂದಿಗೆ ಚಿತ್ರ ಮೇ 22ರಂದು ಬಿಡುಗಡೆಯಾಗಲಿದೆ ಎಂದು ಅವರು ಹೇಳಿದರು.

 

 

 

 

 

 

 

ಪತ್ರಿಕಾಗೋಷ್ಠಿಯಲ್ಲಿ ನಿರ್ಮಾಪಕ ಮುನಿಸ್ವಾಮಿ ಹಾಗೂ ನಟರಾದ ಮಹಾಲಕ್ಷ್ಮಿ, ಗಗನ, ಸೋನಾಕ್ಷಿ, ಶಶಾಂಕ್, ರಾಬರ್ಟ್, ರುದ್ರಪ್ಪ ಸೇರಿದಂತೆ ಇತರರು ಚಿತ್ರದ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು

Spread the love

ಸಂಕಲನಕಾರರಾಗಿ ಗುರುತಿಸಿಕೊಂಡಿರುವ ಎಸ್.ಕೆ. ಸುನೀಲ್ ಕುಮಾರ್ ಅವರು ಮೊದಲ ಬಾರಿಗೆ ನಿರ್ದೇಶನ ಮಾಡಿರುವ “ಮಕ್ಕಳ ಸೈನ್ಯೆ” ಚಿತ್ರ ಮೇ 22ರಂದು ತೆರೆಗೆ ಬರಲು ಸಜ್ಜಾಗಿದೆ. ಈ ಕುರಿತು ಮಾಹಿತಿ ಹಂಚಿಕೊಳ್ಳಲು ಆಯೋಜಿಸಲಾದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿತು.

 

ಎಪ್ಪತ್ತರ ದಶಕದ ಜನಪ್ರಿಯ “ಸಿಂಹದ ಮರಿ ಸೈನ್ಯ” ಚಿತ್ರದ ಬಳಿಕ ಅದೇ ಮಾದರಿಯ ಮಕ್ಕಳ ಚಿತ್ರಗಳು ವಿರಳವಾಗಿದ್ದವು. ಇದೀಗ “ಮಕ್ಕಳ ಸೈನ್ಯೆ” ಆ ಕೊರತೆಯನ್ನು ನೀಗಿಸುವ ಪ್ರಯತ್ನವಾಗಿದೆ. ಚಿತ್ರದಲ್ಲಿ ಸ್ನೇಹ, ಸಾಹಸ, ತಂದೆ-ಮಗಳ ಬಾಂಧವ್ಯ ಹಾಗೂ ಸನಾತನ ಮೌಲ್ಯಗಳ ಸಂಯೋಜನೆ ಇದೆ. ಮೊದಲ ಬಾರಿಗೆ ನಟಿಸಿರುವ ಮಕ್ಕಳು ಅದ್ಭುತವಾಗಿ ಅಭಿನಯಿಸಿದ್ದಾರೆ ಎಂದು ನಿರ್ದೇಶಕರು ತಿಳಿಸಿದರು.

 

 

 

 

 

 

ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆಯ ಅಕ್ಕಿ ಹೆಬ್ಬಾಳಿನಲ್ಲಿ ಚಿತ್ರೀಕರಣ ನಡೆದಿದ್ದು, ಹಿರಿಯ ಸಾಹಿತಿ ದೊಡ್ಡರಂಗೇ ಗೌಡ ಅವರ ಗೀತರಚನೆ ಹಾಗೂ ಸನ್ನಿರಾಜ್ ಅವರ ಸಂಗೀತ ಚಿತ್ರಕ್ಕೆ ಮತ್ತಷ್ಟು ಮೆರುಗು ನೀಡಿದೆ. ಮಕ್ಕಳ ಚಿತ್ರವಾದರೂ, ಕಮರ್ಷಿಯಲ್ ಸಿನಿಮಾಗಳಿಗೆ ಸಮಾನವಾಗಿ ನಿರ್ಮಾಣವಾಗಿದೆ.

 

ಚಿತ್ರಕ್ಕೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆಗಳನ್ನು ಸುನೀಲ್ ಕುಮಾರ್ ಸ್ವತಃ ಬರೆದಿದ್ದು, ಮುನಿಸ್ವಾಮಿ ನಿರ್ಮಾಣ ಮಾಡಿದ್ದಾರೆ. ಸಂಗೀತ ಸಹ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ. “ಸವಾಲಿಗೆ ಸವಾಲ್” ಎಂಬ ಅಡಿಬರಹದೊಂದಿಗೆ ಚಿತ್ರ ಮೇ 22ರಂದು ಬಿಡುಗಡೆಯಾಗಲಿದೆ ಎಂದು ಅವರು ಹೇಳಿದರು.

 

 

 

 

 

 

 

ಪತ್ರಿಕಾಗೋಷ್ಠಿಯಲ್ಲಿ ನಿರ್ಮಾಪಕ ಮುನಿಸ್ವಾಮಿ ಹಾಗೂ ನಟರಾದ ಮಹಾಲಕ್ಷ್ಮಿ, ಗಗನ, ಸೋನಾಕ್ಷಿ, ಶಶಾಂಕ್, ರಾಬರ್ಟ್, ರುದ್ರಪ್ಪ ಸೇರಿದಂತೆ ಇತರರು ಚಿತ್ರದ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು

Spread the love
Continue Reading