Connect with us

Cinema News

“ನಮೋಭಾರತ” ಸೈನಿಕನೊಬ್ಬನ ಪ್ರೀತಿ ಪ್ರೇಮದ ಪಯಣ

Published

on

ಗಡಿ ಭಾಗದಲ್ಲಿ ನಮ್ಮ ದೇಶವನ್ನು ಕಾಯುವ ಸೈನಿಕರ ಜೀವನ, ಸೈನಿಕನೊಬ್ಬನ ಪ್ರೀತಿ, ಪ್ರೇಮದ ಕಥಾಹಂದರವನ್ನು ಹೇಳುವ ಚಿತ್ರ ನಮೋ ಭಾರತ. ಈ ಹಿಂದೆ ಸ್ವಚ್ಚ ಭಾರತದ ಬಗ್ಗೆ ಗಾಂಧೀಜಿ ಕಂಡಿದ್ದ ಕನಸನ್ನಿಟ್ಟುಕೊಂಡು ಗಾಂಧಿ ಕನಸು ಎಂಬ ಚಿತ್ರವನ್ನು ನಿರ್ಮಿಸಿ, ನಿರ್ದೇಶಿಸಿದ್ದ ರಮೇಶ್ ಎಸ್. ಪರವಿನಾಯ್ಕರ್, ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ. ಜೊತೆಗೆ ಚಿತ್ರದ ನಾಯಕ (ಸೈನಿಕ) ಪಾತ್ರವನ್ನೂ ಸಹ ನಿರ್ವಹಿಸಿದ್ದಾರೆ.

ರೈತನೊಬ್ಬನ ಮಗ ಸೈನ್ಯ ಸೇರಿಕೊಂಡಾಗ ದೇಶದ ಗಡಿ ಭಾಗದಲ್ಲಿ ಆತ ಅನುಭವಿಸುವ ಒಂದಷ್ಟು ಸಮಸ್ಯೆಗಳು, ಅಲ್ಲಿ ನಡೆದ ಕಾಶ್ಮೀರಿ ಪಂಡಿತರ ಮಾರಣಹೋಮ, ಆತನಿಗಾದ ಭಯೋತ್ಪಾದನೆಯ ಅನುಭವಗಳನ್ನು ಈ ಚಿತ್ರದ ಮೂಲಕ ಹೇಳಲಾಗಿದೆ, ಈ ಮಧ್ಯೆ ಆ ಸೈನಿಕನಿಗೆ ಕಾಡುವ ತನ್ನ ತಂದೆ, ತಾಯಿಯ ನೆನಪುಗಳು, ಜೊತೆಗೆ ಊರಲ್ಲಿ ತಾನು ಪ್ರೀತಿಸಿದ ಹುಡುಗಿಯ ನೆನಪೂ ಸಹ ಕಾಡುತ್ತದೆ. ತಾನು ಕೆಲಸ ಮಾಡುತ್ತಿರುವ ಕಾಶ್ಮೀರ ಗಡಿಭಾಗದ ಯುವತಿಯೊಬ್ಬಳನ್ನೂ ನಾಯಕ ಲವ್ ಮಾಡುತ್ತಾನೆ.

ಕೊನೆಗೆ ಆತನಿಗೆ ಯಾವ ಹುಡುಗಿ ಸಿಗ್ತಾಳೆ ಅನ್ನೋದೇ ಚಿತ್ರದ ಕಥೆ. ಜಮ್ಮು ಕಾಶ್ಮೀರ, ಲಡಾಕ್ ಅಲ್ಲದೆ ಕರ್ನಾಟಕದ ಕೊಪ್ಪಳ, ಅಂಜನಾದ್ರಿ ಬೆಟ್ಟ, ಕೆ.ಆರ್.ಎಸ್.ಡ್ಯಾಮ್ ಸುತ್ತಮುತ್ತ ನಮೋ ಭಾರತ. ಚಿತ್ರದ ಚಿತ್ರೀಕರಣ ನಡೆಸಲಾಗಿದೆ. ಬರುವ ಮಾರ್ಚ್ ತಿಂಗಳಲ್ಲಿ ಬಿಡುಗಡೆಗೆ ಸಿದ್ದವಾಗಿರುವ ಈ ಚಿತ್ರಕ್ಕೆ ಈಗಾಗಲೇ ಯು/ಎ ಸರ್ಟಿಫಿಕೇಟ್ ಸಿಕ್ಕಿದೆ.

ಶ್ರೀಚೌಡೇಶ್ವರಿ ಫಿಲಂಸ್ ಮೂಲಕ ರಮೇಶ್ ಎಸ್. ಪರವಿನಾಯ್ಕರ್ ಅವರೇ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಜೊತೆಗೆ ನಾಯಕನ ಪಾತ್ರವನ್ನೂ ಸಹ ನಿರ್ವಹಿಸಿದ್ದಾರೆ.

ಎ.ಟಿ.ರವೀಶ್ ಅವರ ಸಂಗೀತ, ಡಾ.ದೊಡ್ಡರಂಗೇಗೌಡ, ಡಾ.ವಿ.ನಾಗೇಂದ್ರ ಪ್ರಸಾದ್ ಅವರ. ಸಾಹಿತ್ಯ, ವೀರೇಶ್ ಎಸ್.ಟಿ.ವಿ. ಹಾಗೂ ಗೌರಿ ವೆಂಕಟೇಶ್ ಅವರ ಛಾಯಾಗ್ರಹಣ, ರುದ್ರೇಶ್ ನಾಗಸಂದ್ರ ಅವರ ಸಂಭಾಷಣೆ, ಹೈಟ್ ಮಂಜು, ನಾಗೇಶ್ ಅವರ ನೃತ್ಯ ನಿರ್ದೇಶನ, ರಾಜರತ್ನ, ವಿನಾಯಕ, ಅಂಜಿತ ಅವರ ಸಹನಿರ್ದೇಶನ ನಮೋ ಭಾರತ ಚಿತ್ರಕ್ಕಿದೆ.

ತಾರಗಣದಲ್ಲಿ ರಮೇಶ್ ಪರವಿನಾಯ್ಕರ್, ಸೋನಾಲಿ ಪಂಡಿತ್ (ಹಿಂದಿ ನಟಿ) ಸುಶ್ಮಿತಾ, ಭವ್ಯ, ಮೈಕೋ ನಾಗರಾಜ್, ಬಿರಾದಾರ್, ಶಂಕರ್ ಭಟ್, ನವನೀತ, ಶ್ರವಣ ಪಂಡಿತ್, ರವೀಂದ್ರ ಸಿಂಗ್ ಶರ್ಮಾ, ಮಾಸ್ಟರ್ ಯುವರಾಜ್ ಪರವಿನಾಯ್ಕರ್ ಮತ್ತಿತರು

Spread the love

ಗಡಿ ಭಾಗದಲ್ಲಿ ನಮ್ಮ ದೇಶವನ್ನು ಕಾಯುವ ಸೈನಿಕರ ಜೀವನ, ಸೈನಿಕನೊಬ್ಬನ ಪ್ರೀತಿ, ಪ್ರೇಮದ ಕಥಾಹಂದರವನ್ನು ಹೇಳುವ ಚಿತ್ರ ನಮೋ ಭಾರತ. ಈ ಹಿಂದೆ ಸ್ವಚ್ಚ ಭಾರತದ ಬಗ್ಗೆ ಗಾಂಧೀಜಿ ಕಂಡಿದ್ದ ಕನಸನ್ನಿಟ್ಟುಕೊಂಡು ಗಾಂಧಿ ಕನಸು ಎಂಬ ಚಿತ್ರವನ್ನು ನಿರ್ಮಿಸಿ, ನಿರ್ದೇಶಿಸಿದ್ದ ರಮೇಶ್ ಎಸ್. ಪರವಿನಾಯ್ಕರ್, ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ. ಜೊತೆಗೆ ಚಿತ್ರದ ನಾಯಕ (ಸೈನಿಕ) ಪಾತ್ರವನ್ನೂ ಸಹ ನಿರ್ವಹಿಸಿದ್ದಾರೆ.

ರೈತನೊಬ್ಬನ ಮಗ ಸೈನ್ಯ ಸೇರಿಕೊಂಡಾಗ ದೇಶದ ಗಡಿ ಭಾಗದಲ್ಲಿ ಆತ ಅನುಭವಿಸುವ ಒಂದಷ್ಟು ಸಮಸ್ಯೆಗಳು, ಅಲ್ಲಿ ನಡೆದ ಕಾಶ್ಮೀರಿ ಪಂಡಿತರ ಮಾರಣಹೋಮ, ಆತನಿಗಾದ ಭಯೋತ್ಪಾದನೆಯ ಅನುಭವಗಳನ್ನು ಈ ಚಿತ್ರದ ಮೂಲಕ ಹೇಳಲಾಗಿದೆ, ಈ ಮಧ್ಯೆ ಆ ಸೈನಿಕನಿಗೆ ಕಾಡುವ ತನ್ನ ತಂದೆ, ತಾಯಿಯ ನೆನಪುಗಳು, ಜೊತೆಗೆ ಊರಲ್ಲಿ ತಾನು ಪ್ರೀತಿಸಿದ ಹುಡುಗಿಯ ನೆನಪೂ ಸಹ ಕಾಡುತ್ತದೆ. ತಾನು ಕೆಲಸ ಮಾಡುತ್ತಿರುವ ಕಾಶ್ಮೀರ ಗಡಿಭಾಗದ ಯುವತಿಯೊಬ್ಬಳನ್ನೂ ನಾಯಕ ಲವ್ ಮಾಡುತ್ತಾನೆ.

ಕೊನೆಗೆ ಆತನಿಗೆ ಯಾವ ಹುಡುಗಿ ಸಿಗ್ತಾಳೆ ಅನ್ನೋದೇ ಚಿತ್ರದ ಕಥೆ. ಜಮ್ಮು ಕಾಶ್ಮೀರ, ಲಡಾಕ್ ಅಲ್ಲದೆ ಕರ್ನಾಟಕದ ಕೊಪ್ಪಳ, ಅಂಜನಾದ್ರಿ ಬೆಟ್ಟ, ಕೆ.ಆರ್.ಎಸ್.ಡ್ಯಾಮ್ ಸುತ್ತಮುತ್ತ ನಮೋ ಭಾರತ. ಚಿತ್ರದ ಚಿತ್ರೀಕರಣ ನಡೆಸಲಾಗಿದೆ. ಬರುವ ಮಾರ್ಚ್ ತಿಂಗಳಲ್ಲಿ ಬಿಡುಗಡೆಗೆ ಸಿದ್ದವಾಗಿರುವ ಈ ಚಿತ್ರಕ್ಕೆ ಈಗಾಗಲೇ ಯು/ಎ ಸರ್ಟಿಫಿಕೇಟ್ ಸಿಕ್ಕಿದೆ.

ಶ್ರೀಚೌಡೇಶ್ವರಿ ಫಿಲಂಸ್ ಮೂಲಕ ರಮೇಶ್ ಎಸ್. ಪರವಿನಾಯ್ಕರ್ ಅವರೇ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಜೊತೆಗೆ ನಾಯಕನ ಪಾತ್ರವನ್ನೂ ಸಹ ನಿರ್ವಹಿಸಿದ್ದಾರೆ.

ಎ.ಟಿ.ರವೀಶ್ ಅವರ ಸಂಗೀತ, ಡಾ.ದೊಡ್ಡರಂಗೇಗೌಡ, ಡಾ.ವಿ.ನಾಗೇಂದ್ರ ಪ್ರಸಾದ್ ಅವರ. ಸಾಹಿತ್ಯ, ವೀರೇಶ್ ಎಸ್.ಟಿ.ವಿ. ಹಾಗೂ ಗೌರಿ ವೆಂಕಟೇಶ್ ಅವರ ಛಾಯಾಗ್ರಹಣ, ರುದ್ರೇಶ್ ನಾಗಸಂದ್ರ ಅವರ ಸಂಭಾಷಣೆ, ಹೈಟ್ ಮಂಜು, ನಾಗೇಶ್ ಅವರ ನೃತ್ಯ ನಿರ್ದೇಶನ, ರಾಜರತ್ನ, ವಿನಾಯಕ, ಅಂಜಿತ ಅವರ ಸಹನಿರ್ದೇಶನ ನಮೋ ಭಾರತ ಚಿತ್ರಕ್ಕಿದೆ.

ತಾರಗಣದಲ್ಲಿ ರಮೇಶ್ ಪರವಿನಾಯ್ಕರ್, ಸೋನಾಲಿ ಪಂಡಿತ್ (ಹಿಂದಿ ನಟಿ) ಸುಶ್ಮಿತಾ, ಭವ್ಯ, ಮೈಕೋ ನಾಗರಾಜ್, ಬಿರಾದಾರ್, ಶಂಕರ್ ಭಟ್, ನವನೀತ, ಶ್ರವಣ ಪಂಡಿತ್, ರವೀಂದ್ರ ಸಿಂಗ್ ಶರ್ಮಾ, ಮಾಸ್ಟರ್ ಯುವರಾಜ್ ಪರವಿನಾಯ್ಕರ್ ಮತ್ತಿತರು

Spread the love
Continue Reading
Click to comment

Leave a Reply

Your email address will not be published. Required fields are marked *