Connect with us

Cinema News

ಸುಮಲತಾ ಅಂಬರೀಶ್ ಅವರಿಂದ “ನಿರ್ಮುಕ್ತ” ಹಾಡಿನ ಲೋಕಾರ್ಪಣೆ. ಟೀಸರ್ ಬಿಡುಗಡೆ ಮಾಡಿ ಶುಭ ಕೋರಿದ ಅಭಿಷೇಕ್ ಅಂಬರೀಶ್.

Published

on

ಕನ್ನಡ ಚಿತ್ರರಂಗದಲ್ಲಿ ಈಗ ಉತ್ತಮ ಬೆಳವಣಿಗೆ. ಕೇವಲ ಬೆರಳೆಣಿಕೆಯಷ್ಟಿದ್ದ ನಿರ್ದೇಶಕಿಯರ ಸಂಖ್ಯೆ ಈಗ ಹೆಚ್ಚುತ್ತಿದೆ. ಸಾಕಷ್ಟು ಜನ ಮಹಿಳೆಯರು ನಿರ್ದೇಶನದತ್ತ ಒಲವು ತೋರುತ್ತಿದ್ದಾರೆ.

“ನಿರ್ಮುಕ್ತ” ಚಿತ್ರವನ್ನು ಸಹ ರಮ್ಯ ಶ್ರೀನಿವಾಸ್ ನಿರ್ದೇಶಿಸಿದ್ದಾರೆ. ಕಥೆ, ಚಿತ್ರಕಥೆ ಸಹ ಇವರೆ ಬರೆದಿದ್ದಾರೆ. ಅಷ್ಟೇ ಅಲ್ಲದೆ ರೂಪಸ್ವಾಮಿ ಅವರೊಡಗೂಡಿ ನಿರ್ಮಾಣವನ್ನು ಮಾಡಿದ್ದಾರೆ.

ಇತ್ತೀಚೆಗೆ ಈ ಚಿತ್ರದ ಟೀಸರ್ ಹಾಗೂ ಹಾಡೊಂದರ ಬಿಡುಗಡೆ ಸಮಾರಂಭ ನೆರವೇರಿತು. ಸಂಸದೆ ಸುಮಲತಾ ಅಂಬರೀಶ್, ಅಭಿಷೇಕ್ ಅಂಬರೀಶ್ ಹಾಗೂ ರಾಕ್ ಲೈನ್ ವೆಂಕಟೇಶ್ ಅತಿಥಿಗಳಾಗಿ ಆಗಮಿಸಿ ಶುಭ ಕೋರಿದರು.

ಈ ಚಿತ್ರದ ನಾಯಕನ‌ ಹೆಸರು ಕೂಡ ಅಭಿಷೇಕ್. ಇವರು ರೆಬಲ್ ಸ್ಟಾರ್ ಅಂಬರೀಶ್ ಅವರ ತಂಗಿ ರಂಜನಿ ಅವರ ಪುತ್ರ. ನವ್ಯ ಪೂಜಾರಿ ಈ ಚಿತ್ರದ ನಾಯಕಿ.

ಇದು ನಮ್ಮ ಕುಟುಂಬದ ಸಮಾರಂಭ. ಏನು ಮಾತನಾಡಬೇಕೊ ತಿಳಿಯುತ್ತಿಲ್ಲ. ಅಂಬರೀಶ್ ಅವರ ತಾತಾ ಚೌಡಯ್ಯ ಅವರು. ಸಂಗೀತ ಕ್ಷೇತ್ರದಲ್ಲಿ ಅವರದೇ ಹೆಸರು. ನಂತರ ಅಂಬರೀಶ್ ಸಿನಿಮಾದಲ್ಲಿ ಹೆಸರು ಮಾಡಿದರು. ಆನಂತರ ನಮ್ಮ ಅಭಿಷೇಕ್. ಈಗ ಈ ಅಭಿಷೇಕ್. ಸಂತೋಷವಾಗುತ್ತಿದೆ ಎಲ್ಲರನ್ನು ನೋಡಿ. ಅಭಿಷೇಕ್ ಸಿ.ಕೆ ಸಹ ಚಿತ್ರರಂಗದಲ್ಲಿ ಒಳ್ಳೆಯ ಹೆಸರು ಮಾಡಲಿ ಎಂದರು ಸುಮಲತಾ ಅಂಬರೀಶ್.

 

 

 

 

ಟೀಸರ್ ನೋಡಿದೆ. ಚೆನ್ನಾಗಿದೆ. ಅಭಿಷೇಕ್ ಸಿ.ಕೆ ನನ್ನ ಬ್ರದರ್. ಅವರಿಗೆ ಶುಭವಾಗಲಿ ಎಂದು ಅಭಿಷೇಕ್ ಅಂಬರೀಶ್ ಹಾರೈಸಿದರು.

ಚಿತ್ರತಂಡಕ್ಕೆ ಶುಭಕೋರಿದ ರಾಕ್ ಲೈನ್ ವೆಂಕಟೇಶ್, ಅಂಬರೀಶ್ ಅವರನ್ನು ನೆನೆದು ಭಾವುಕರಾದರು.

ಮೂಲತಃ ವೈದ್ಯರಾಗಿರುವ ಡಾ||ರೂಪಸ್ವಾಮಿ ನಿರ್ಮಾಣದ ಬಗ್ಗೆ ಮಾತನಾಡುತ್ತಾ, ಇಡೀ ತಂಡಕ್ಕೆ ಧನ್ಯವಾದ ತಿಳಿಸಿದರು.

ಇದೊಂದು ಮೆಡಿಕಲ್ ಕಾಲೇಜ್ ನಲ್ಲಿ ನಡೆಯುವ ಕಥೆ. ಸಸ್ಪೆನ್ಸ್, ಥ್ರಿಲ್ಲರ್ ಕಥಾಹಂದರ ಹೊಂದಿದೆ. ನಾನು ನಿರ್ದೇಶನ ಮಾಡಲು ಸಹಕಾರ ನೀಡಿದವರು ನನ್ನ ಪತಿ ಶ್ರೀನಿವಾಸ್. ಬಂದಿರುವ ಗಣ್ಯರಿಗೆ , ಇಡೀ ತಂಡಕ್ಕೆ ಧನ್ಯವಾದ ಎಂದರು ನಿರ್ದೇಶಕಿ ರಮ್ಯ ಶ್ರೀನಿವಾಸ್.

ಹಾಡು ಬರೆದಿರುವ ಸ್ವಾಮಿ ಹಾಗೂ ಸಂಗೀತ ನೀಡಿರುವ ಸಾಮ್ರಾಟ್ “ನಿರ್ಮುಕ್ತ” ಚತ್ರದ ಬಗ್ಗೆ ಮಾತನಾಡಿದರು.

Spread the love

ಕನ್ನಡ ಚಿತ್ರರಂಗದಲ್ಲಿ ಈಗ ಉತ್ತಮ ಬೆಳವಣಿಗೆ. ಕೇವಲ ಬೆರಳೆಣಿಕೆಯಷ್ಟಿದ್ದ ನಿರ್ದೇಶಕಿಯರ ಸಂಖ್ಯೆ ಈಗ ಹೆಚ್ಚುತ್ತಿದೆ. ಸಾಕಷ್ಟು ಜನ ಮಹಿಳೆಯರು ನಿರ್ದೇಶನದತ್ತ ಒಲವು ತೋರುತ್ತಿದ್ದಾರೆ.

“ನಿರ್ಮುಕ್ತ” ಚಿತ್ರವನ್ನು ಸಹ ರಮ್ಯ ಶ್ರೀನಿವಾಸ್ ನಿರ್ದೇಶಿಸಿದ್ದಾರೆ. ಕಥೆ, ಚಿತ್ರಕಥೆ ಸಹ ಇವರೆ ಬರೆದಿದ್ದಾರೆ. ಅಷ್ಟೇ ಅಲ್ಲದೆ ರೂಪಸ್ವಾಮಿ ಅವರೊಡಗೂಡಿ ನಿರ್ಮಾಣವನ್ನು ಮಾಡಿದ್ದಾರೆ.

ಇತ್ತೀಚೆಗೆ ಈ ಚಿತ್ರದ ಟೀಸರ್ ಹಾಗೂ ಹಾಡೊಂದರ ಬಿಡುಗಡೆ ಸಮಾರಂಭ ನೆರವೇರಿತು. ಸಂಸದೆ ಸುಮಲತಾ ಅಂಬರೀಶ್, ಅಭಿಷೇಕ್ ಅಂಬರೀಶ್ ಹಾಗೂ ರಾಕ್ ಲೈನ್ ವೆಂಕಟೇಶ್ ಅತಿಥಿಗಳಾಗಿ ಆಗಮಿಸಿ ಶುಭ ಕೋರಿದರು.

ಈ ಚಿತ್ರದ ನಾಯಕನ‌ ಹೆಸರು ಕೂಡ ಅಭಿಷೇಕ್. ಇವರು ರೆಬಲ್ ಸ್ಟಾರ್ ಅಂಬರೀಶ್ ಅವರ ತಂಗಿ ರಂಜನಿ ಅವರ ಪುತ್ರ. ನವ್ಯ ಪೂಜಾರಿ ಈ ಚಿತ್ರದ ನಾಯಕಿ.

ಇದು ನಮ್ಮ ಕುಟುಂಬದ ಸಮಾರಂಭ. ಏನು ಮಾತನಾಡಬೇಕೊ ತಿಳಿಯುತ್ತಿಲ್ಲ. ಅಂಬರೀಶ್ ಅವರ ತಾತಾ ಚೌಡಯ್ಯ ಅವರು. ಸಂಗೀತ ಕ್ಷೇತ್ರದಲ್ಲಿ ಅವರದೇ ಹೆಸರು. ನಂತರ ಅಂಬರೀಶ್ ಸಿನಿಮಾದಲ್ಲಿ ಹೆಸರು ಮಾಡಿದರು. ಆನಂತರ ನಮ್ಮ ಅಭಿಷೇಕ್. ಈಗ ಈ ಅಭಿಷೇಕ್. ಸಂತೋಷವಾಗುತ್ತಿದೆ ಎಲ್ಲರನ್ನು ನೋಡಿ. ಅಭಿಷೇಕ್ ಸಿ.ಕೆ ಸಹ ಚಿತ್ರರಂಗದಲ್ಲಿ ಒಳ್ಳೆಯ ಹೆಸರು ಮಾಡಲಿ ಎಂದರು ಸುಮಲತಾ ಅಂಬರೀಶ್.

 

 

 

 

ಟೀಸರ್ ನೋಡಿದೆ. ಚೆನ್ನಾಗಿದೆ. ಅಭಿಷೇಕ್ ಸಿ.ಕೆ ನನ್ನ ಬ್ರದರ್. ಅವರಿಗೆ ಶುಭವಾಗಲಿ ಎಂದು ಅಭಿಷೇಕ್ ಅಂಬರೀಶ್ ಹಾರೈಸಿದರು.

ಚಿತ್ರತಂಡಕ್ಕೆ ಶುಭಕೋರಿದ ರಾಕ್ ಲೈನ್ ವೆಂಕಟೇಶ್, ಅಂಬರೀಶ್ ಅವರನ್ನು ನೆನೆದು ಭಾವುಕರಾದರು.

ಮೂಲತಃ ವೈದ್ಯರಾಗಿರುವ ಡಾ||ರೂಪಸ್ವಾಮಿ ನಿರ್ಮಾಣದ ಬಗ್ಗೆ ಮಾತನಾಡುತ್ತಾ, ಇಡೀ ತಂಡಕ್ಕೆ ಧನ್ಯವಾದ ತಿಳಿಸಿದರು.

ಇದೊಂದು ಮೆಡಿಕಲ್ ಕಾಲೇಜ್ ನಲ್ಲಿ ನಡೆಯುವ ಕಥೆ. ಸಸ್ಪೆನ್ಸ್, ಥ್ರಿಲ್ಲರ್ ಕಥಾಹಂದರ ಹೊಂದಿದೆ. ನಾನು ನಿರ್ದೇಶನ ಮಾಡಲು ಸಹಕಾರ ನೀಡಿದವರು ನನ್ನ ಪತಿ ಶ್ರೀನಿವಾಸ್. ಬಂದಿರುವ ಗಣ್ಯರಿಗೆ , ಇಡೀ ತಂಡಕ್ಕೆ ಧನ್ಯವಾದ ಎಂದರು ನಿರ್ದೇಶಕಿ ರಮ್ಯ ಶ್ರೀನಿವಾಸ್.

ಹಾಡು ಬರೆದಿರುವ ಸ್ವಾಮಿ ಹಾಗೂ ಸಂಗೀತ ನೀಡಿರುವ ಸಾಮ್ರಾಟ್ “ನಿರ್ಮುಕ್ತ” ಚತ್ರದ ಬಗ್ಗೆ ಮಾತನಾಡಿದರು.

Spread the love
Continue Reading
Click to comment

Leave a Reply

Your email address will not be published. Required fields are marked *