Television News
ಒಂದೇ ರೂಮ್ ನಲ್ಲಿ ಪವಿತ್ರ ಲೋಕೇಶ್, ನರೇಶ್: ಚಪ್ಪಲಿಯಿಂದ ಹಲ್ಲೆ ಮಾಡಲು ಮುಂದಾದ ರಮ್ಯಾ ರಘುಪತಿ

ಮೈಸೂರು: ಟಾಲಿವುಡ್ ನಟ ನರೇಶ್ ಹಾಗೂ ಪವಿತ್ರಾ ಲೋಕೇಶ್ ನಿತ್ಯ ಒಂದಲ್ಲ ಒಂದು ರೀತಿಯಲ್ಲಿ ಸುದ್ದಿಯಾಗ್ತಿದ್ದಾರೆ. ಇದೀಗ ನರೇಶ್ ಹಾಗೂ ಪವಿತ್ರಾ ಲೋಕೇಶ್ ಇದ್ದ ಹೋಟೆಲ್ ಮುಂದೆ ರಮ್ಯಾ ರಘುಪತಿ ದೊಡ್ಡ ಹೈಡ್ರಾಮಾ ಮಾಡಿದ್ದಾರೆ.
ಮೈಸೂರಿನ ಹುಣಸೂರು ರಸ್ತೆಯ ಹೋಟೆಲ್ ಒಂದರಲ್ಲಿ ಪವಿತ್ರಾ ಲೋಕೇಶ್ ಹಾಗೂ ನರೇಶ್ ಒಂದೇ ರೂಮ್ನಲ್ಲಿದ್ದರು. ವಿಷಯ ತಿಳಿದ ನರೇಶ್ ಮೂರನೇ ಪತ್ನಿ ರಮ್ಯ ರಘುಪತಿ ದೊಡ್ಡ ಹೈಡ್ರಾಮ ಸೃಷ್ಟಿಸಿದ್ದಾರೆ.
ರಮ್ಯಾ ಎಷ್ಟೇ ಬಾಗಿಲು ಬಡಿದರು ನರೇಶ್ ಹಾಗೂ ಪವಿತ್ರಾ ರೂಂ ಬಾಗಿಲು ತೆರೆಯಲಿಲ್ಲ. ಈ ವೇಳೆ ಪೊಲೀಸ್ ಭದ್ರತೆಯಲ್ಲಿ ಪವಿತ್ರಾ ಹಾಗೂ ನರೇಶ್ ರೂಂನಿಂದ ಹೊರ ಹೋಗಿದ್ದಾರೆ. ಈ ವೇಳೆ ರಮ್ಯಾ ರಘುಪತಿ ಪತಿ ನರೇಶ್, ಪವಿತ್ರಾ ಮೇಲೆ ಚಪ್ಪಲಿಯಿಂದ ಹಲ್ಲೆ ನಡೆಸಲು ಮುಂದಾಗಿದ್ದಾರೆ. ಈ ವೇಳೆ ಕೂಡಲೇ ಪೊಲೀಸರು ರಮ್ಯಾ ರಘುಪತಿಯನ್ನು ತಡೆದಿದ್ದಾರೆ.
ನಂತರ ಪವಿತ್ರಾ ಲೋಕೇಶ್ ಹಾಗೂ ನರೇಶ್ಗೆ ಅವಾಚ್ಯ ಶಬ್ದಗಳಿಂದ ರಮ್ಯಾ ರಘುಪತಿ ನಿಂದಿಸಿದ್ದಾರೆ. ಈ ವೇಳೆ ನರೇಶ್ ಅವರು ನೀನೊಬ್ಬಳು ವಂಚಕಿ, ಮೋಸಗಾತಿ ಎಂದು ಜೋರಾಗಿ ಕಿರುಚಾಡುತ್ತಾ, ವಿಜಲ್ ಹೊಡೆಯುತ್ತಾ ಲಿಫ್ಟ್ ಮೂಲಕ ತೆರಳಿದರು.
