Cinema News

ನಿಶ್ಚಿತ ಕಂಬೈನ್ಸ್ ನೂತನ ಚಿತ್ರದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್.

Published

on

ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅಭಿನಯದ “ವೇದ” ಚಿತ್ರ ಎಲ್ಲಾ ಕಡೆ ಯಶಸ್ವಿಯಾಗಿ ಪ್ರದರ್ಶನವಾಗುತ್ತಿದೆ. ಈ ಸಮಯದಲ್ಲಿ ಶಿವಣ್ಣ ನಾಯಕರಾಗಿ ನಟಿಸಲಿರುವ ಹೊಸಚಿತ್ರದ ಬಗ್ಗೆ ಮಾಹಿತಿ ಬಂದಿದೆ. ನಿಶ್ಚಿತ ಕಂಬೈನ್ಸ್ ಲಾಂಛನದಲ್ಲಿ ಮಂಜುಳಾ ಶಿವಾರ್ಜುನ್ ನಿರ್ಮಾಣ ಮಾಡುತ್ತಿರುವ ಈ ನೂತನ ಚಿತ್ರದ ನಾಯಕರಾಗಿ ಅಭಿನಯಿಸಲಿದ್ದಾರೆ. ನಿತಿನ್ ಶಿವಾರ್ಜುನ್ ಈ ಚಿತ್ರದ ಸಹ ನಿರ್ಮಾಪಕರು. ಈ ಸಂಸ್ಥೆಯಿಂದ ಹಿಂದೆ “ಶಿವಾರ್ಜುನ” ಚಿತ್ರ ನಿರ್ಮಾಣವಾಗಿತ್ತು.

 

 

ಕನ್ನಡದ ಸುಪ್ರಸಿದ್ಧ ರಿಯಾಲಿಟಿ ಶೋ “ಮಜಾಟಾಕೀಸ್” ಹಾಗೂ ಸೃಜನ್ ಲೋಕೇಶ್ ಅಭಿನಯದ “ಎಲ್ಲಿದೆ ಇಲ್ಲಿತನಕ” ಚಿತ್ರದ ನಿರ್ದೇಶಕ ತೇಜಸ್ವಿ ಕೆ ನಾಗ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.‌ ಶಿವಣ್ಣ ಈ ಚಿತ್ರದ ಕಥೆ ಕೇಳಿ ಅಭಿನಯಿಸಲು ಒಪ್ಪಿಗೆ ನೀಡಿದ್ದಾರೆ. ಶಿವರಾಜಕುಮಾರ್ ಅವರು ಈತನಕ ಮಾಡಿರದ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಚಿತ್ರದ ಶೀರ್ಷಿಕೆ ಹಾಗೂ ಉಳಿದ ವಿಷಯಗಳನ್ನು ಶೀಘ್ರದಲ್ಲೇ ತಿಳಿಸಲಾಗುವುದು ಎಂದು ನಿರ್ದೇಶಕ ತೇಜಸ್ವಿ ಕೆ ನಾಗ್ ತಿಳಿಸಿದ್ದಾರೆ

 

Spread the love
Click to comment

Copyright © 2019 PopcornKannada.com