Cinema News

ಬಳ್ಳಾರಿ ರೇಣುಕಾದೇವಿ ಜಾತ್ರೆಯಲ್ಲಿ ಹಾಗೂ ಮಂತ್ರಾಲಯ ಗುರು ಸಾರ್ವಭೌಮರ ಸನ್ನಿಧಿಯಲ್ಲಿ ಬಿಡುಗಡೆಯಾಯಿತು “ಉಸಿರೇ ಉಸಿರೇ” ಚಿತ್ರದ ಟೀಸರ್ .

Published

on

ಉಸಿರೇ.. ಉಸಿರೇ… ಸದ್ಯ ಈಗಾಗಲೇ ಹಲವಾರು ವಿಶೇಷತೆಗಳಿಂದ ಸದ್ದು ಮಾಡುತ್ತಾ ಪ್ರೇಕ್ಷಕರ ಕುತೂಹಲ ಮುಡಿಸುತ್ತಿರುವ ಚಿತ್ರ..ಎನ್ ಗೊಂಬೆ ಲಾಂಛನದಲ್ಲಿ ಪ್ರದೀಪ್ ಯಾದವ್ ನಿರ್ಮಾಣದ ಸಿ ಎಂ ವಿಜಯ್ ನಿರ್ದೇಶನದ “ಉಸಿರೇ ಉಸಿರೇ” ಚಿತ್ರಕ್ಕೆ ಕಿಚ್ಚ ಸುದೀಪ್ ಎಂಟ್ರಿಯಾಗುತ್ತಲೇ ಚಿತ್ರಕ್ಕೆ ಹೈ ವೋಲ್ಟೇಜ್ ಸಿಕ್ಕಿತ್ತು..

ಸದ್ಯ ಈಗಾಗಲೇ “ಉಸಿರೇ ಉಸಿರೇ” ಚಿತ್ರವು ಚಿತ್ರದ ಟೀಸರ್ ಒಂದನ್ನು ಬಿಡುಗಡೆ ಮಾಡಿ ಪ್ರೇಕ್ಷಕರ ಹೃದಯ ಬಡಿತವನ್ನು ಹೆಚ್ಚು ಮಾಡಿದೆ.

ಇತ್ತೀಚೆಗೆ ಈ ಚಿತ್ರದ ಟೀಸರ್ ಬಳ್ಳಾರಿ ಶ್ರೀ ರೇಣುಕಾ ಎಲ್ಲಮ್ಮ ಜಾತ್ರೆಯಲ್ಲಿ‌‌ ಸುಮಾರು ಹತ್ತು ಸಾವಿರಕ್ಕೂ ಅಧಿಕ ಜನರ ಸಮ್ಮುಖದಲ್ಲಿ ಸದ್ಗುರು ಜುಮಾರಿ ತಾತಾಯ್ಯ ಅವರು ಈ ಚಿತ್ರದ ಟೀಸರ್ ಬಿಡುಗಡೆ ಮಾಡಿದ್ದಾರೆ. ಅಂದು ಸಂಜೆ ಮಂತ್ರಾಲಯದ ಗುರು ಸಾರ್ವಭೌಮರ ಸನ್ನಿಧಿಯಲ್ಲಿ ಶ್ರೀ ಸುಬುಧೇಂದ್ರ ತೀರ್ಥರು ಟೀಸರ್ ಬಿಡುಗಡೆ ಮಾಡಿ ಆಶೀರ್ವಾದಿಸಿದ್ದಾರೆ. ನಾಯಕ ರಾಜೀವ್(ಬಿಗಬಾಸ್), ನಾಯಕಿ ಶ್ರೀಜಿತ ಹಾಗೂ ನಿರ್ದೇಶಕ ಸಿ.ಎಂ.ವಿಜಯ್ ಮುಂತಾದ ಚಿತ್ರತಂಡದ ಸದಸ್ಯರು ಉಪಸ್ಥಿತರಿದ್ದರು. ಟೀಸರ್ ಬಿಡುಗಡೆಯಾಗಿ ಎರಡು ದಿನಗಳಲ್ಲಿ ಒಂದು ಮಿಲಿಯನ್ ಗೂ ಅಧಿಕ ವೀಕ್ಷಣೆಯಾಗಿ, ಮೆಚ್ಚುಗೆ ಪಡೆದುಕೊಳ್ಳುತ್ತಿದೆ.

 

 

ಈಗಾಗಲೇ ಟೀಸರ್ ನಲ್ಲಿರುವ ಸಂಗೀತ, ಹೀರೊ ಎಂಟ್ರಿ ಆಲಿ ಬ್ರಹ್ಮನಂದಮ್ ಕಾಮಿಡಿ ದೇವರಾಜ್ ರವರ ಪಾತ್ರ ಹಾಗೂ ಸಂಭಾಷಣೆ ಪ್ರೇಕ್ಷಕರ ಮನಸನ್ನು ದೋಚಿ ಒಂದೇ ದಿನದಲ್ಲಿ ಒಂದು ಮಿಲಿಯನ್ ಗೂ ಹೆಚ್ಚು ವೀಕ್ಷಣೆ ಪಡೆದಿದೆ..

“ಬಿಗ್ ಬಾಸ್” ಖ್ಯಾತಿಯ ರಾಜೀವ್ ಈ ಚಿತ್ರದ ನಾಯಕ. ಶ್ರೀಜಿತ ನಾಯಕಿ. ತಾರಾ, ಸುಚೇಂದ್ರ ಪ್ರಸಾದ್, ರಾಜೇಶ್ ನಟರಂಗ, ಆಲಿ,ಬ್ರಹ್ಮಾನಂದಮ್,ಸಾಧುಕೋಕಿಲ, ದೇವರಾಜ್, ಮಂಜು ಪಾವಗಡ, ಜಗಪ್ಪ, ಶಿವು, ಸುಶ್ಮಿತಾ ಹಾಗೂ ಕಿಚ್ಚ ಸುದೀಪ ಮುಂತಾದವರು ತಾರಾಬಳಗದಲ್ಲಿದ್ದಾರೆ.

 

 

ಸಿ.ಎಂ.ವಿಜಯ್ ನಿರ್ದೇಶನದ ಈ ಚಿತ್ರಕ್ಕೆ ಮನು ಬಿ ಕೆ ಛಾಯಾಗ್ರಹಣ, ಕೆ ಎಂ ಪ್ರಕಾಶ್ ಸಂಕಲನ, ಟೈಗರ್ ಶಿವು ಸಾಹಸ ನಿರ್ದೇಶನ ಹಾಗೂ ಮೋಹನ್ ಮತ್ತು ಹೈಟ್ ಮಂಜು ಅವರ ನೃತ್ಯ ನಿರ್ದೇಶನವಿದೆ ವಿವೇಕ್ ಚಕ್ರವರ್ತಿಯ ಸಂಗೀತವಿದೆ.

Spread the love
Click to comment

Copyright © 2019 PopcornKannada.com