Connect with us

Cinema News

“ಯಥಾಭವ” ಚಿತ್ರದ ಡಬ್ಬಿಂಗ್ ಪೂರ್ಣ. ಆಗಸ್ಟ್ 25 ರಂದು ಬರಲಿದೆ ಕೋರ್ಟ್ ಡ್ರಾಮ ಜಾನರ್ ನ ಈ ಚಿತ್ರದ ಟೀಸರ್ .

Published

on

ಗೌತಮ್ ಬಸವರಾಜ್ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ನಿರ್ದೇಶಿಸಿರುವ “ಯಥಾಭವ” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದ್ದು, ಪ್ರಸ್ತುತ ಡಬ್ಬಿಂಗ್ ಸಹ ಪೂರ್ಣವಾಗಿದೆ. “ಕೋರ್ಟ್ ಡ್ರಾಮ” ಜಾನರ್ ನ ಈ ಚಿತ್ರದ ಟೀಸರ್ ಆಗಸ್ಟ್ 25 ರಂದು ಬಿಡುಗಡೆಯಾಗಲಿದೆ.

 

ಪವನ್ ಶಂಕರ್ ಹಾಗೂ ಸಹನ ಸುಧಾಕರ್ ನಾಯಕ, ನಾಯಕಿಯಾಗಿ ನಟಿಸಿರುವ ಈ ಚಿತ್ರದ ಪ್ರಮುಖಪಾತ್ರದಲ್ಲಿ ದತ್ತಣ್ಣ, ಬಾಲ ರಾಜವಾಡಿ ಹಾಗೂ ಗೋಪಾಲಕೃಷ್ಣ ದೇಶಪಾಂಡೆ ಅಭಿನಯಿಸಿದ್ದಾರೆ. ಎಂಭತ್ತರ ಹರಯದಲ್ಲೂ ಯುವಕರು ನಾಚುವಂತಹ ದತ್ತಣ್ಣ ಈ ಚಿತ್ರದಲ್ಲಿ ನ್ಯಾಯಾಧೀಶರಾಗಿ ಅಭಿನಯಿಸಿದ್ದಾರೆ. ಗೋಪಾಲಕೃಷ್ಣ ದೇಶಪಾಂಡೆ ಅವರು ವಕೀಲರಾಗಿ ಹಾಗೂ ಬಾಲ ರಾಜವಾಡಿ ಅವರು ಗೃಹ ಸಚಿವರಾಗಿ ಕಾಣಿಸಿಕೊಂಡಿದ್ದಾರೆ. ಮೂವರ ಅಭಿನಯವೂ ಮನೋಜ್ಞವಾಗಿ ಮೂಡಿಬಂದಿದೆ ಎನ್ನುತ್ತಾರೆ ನಿರ್ದೇಶಕರು.

 

ನಿರ್ದೇಶಕ ಗೌತಮ್ ಬಸವರಾಜ್ ಅವರು ಸೇರಿದಂತೆ ಈ ಚಿತ್ರದಲ್ಲಿ ನಟಿಸಿರುವ ಬಹುತೇಕ ತಂತ್ರಜ್ಞರು ಹೈದರಾಬಾದ್ ನ ಅನ್ನಪೂರ್ಣ ಸ್ಟುಡಿಯೋಸ್ ನಲ್ಲಿ ಮೂರುವರ್ಷಗಳ‌ ಕಾಲ ಫಿಲಂ ಮೇಕಿಂಗ್ ಕೋರ್ಸ್ ಮುಗಿಸಿ ಈ ಮಾಡಿರುವುದು ವಿಶೇಷ.

Macht entertainments ಲಾಂಛನದಲ್ಲಿ ಸುಜಾತ ಕುಮಾರಿ ಹಾಗೂ ಅನಿಲ್ ಕುಮಾರ್ ಬಿ.ಎನ್ ನಿರ್ಮಾಣ ಮಾಡಿರುವ ಈ ಚಿತ್ರಕ್ಕೆ ಹರ್ಷ್ ಮಿಶ್ರ ಛಾಯಾಗ್ರಹಣ, ಹರೀಶ್ ಚೌಧರಿ ಸಂಕಲನ, ಕುಂಗ್ಫು ಚಂದ್ರು ಸಾಹಸ ನಿರ್ದೇಶನ, ಸುಚಿತ್ ಚವ್ಹಾಣ್, ನೃತ್ಯ ನಿರ್ದೇಶನ , ಸ್ಮಿತ ಕುಲಕರ್ಣಿ ಕಲಾ ನಿರ್ದೇಶನ ಹಾಗೂ ನಿರ್ಮಾಲ್ ಜೋಶಿ ಅವರ ಸಹ ನಿರ್ದೇಶನವಿದೆ. ಉತ್ಸವ್ ಶ್ರೇಯಸ್ ಸಂಗೀತ ನೀಡಿರುವ ಈ ಚಿತ್ರದಲ್ಲಿ ನಾಲ್ಕು ಹಾಡುಗಳಿದ್ದು, ಸುರೇಶ್ ರೆಡ್ಡಿ ಹಾಗೂ ಅಭಿಷೇಕ್ ಅಕ್ಕಣ್ಣನವರ್ ಹಾಡುಗಳನ್ನು ಬರೆದಿದ್ದಾರೆ.

ಹಿರಿಯ ನಟ ರಾಕ್ ಲೈನ್ ಸುಧಾಕರ್ ಅವರ ಪುತ್ರ ಗೌತಮ್ ಸುಧಾಕರ್ ಈ ಚಿತ್ರದ ಪ್ರಮುಖಪಾತ್ರದಲ್ಲಿ ನಟಿಸಿದ್ದಾರೆ. ಮಾಸ್ಟರ್ ಶಮಂತ್, ನೀನಾಸಂ ಆನಂದ್, ಉಮಾ ಹೆಬ್ಬಾರ್ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.

Spread the love

ಗೌತಮ್ ಬಸವರಾಜ್ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ನಿರ್ದೇಶಿಸಿರುವ “ಯಥಾಭವ” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದ್ದು, ಪ್ರಸ್ತುತ ಡಬ್ಬಿಂಗ್ ಸಹ ಪೂರ್ಣವಾಗಿದೆ. “ಕೋರ್ಟ್ ಡ್ರಾಮ” ಜಾನರ್ ನ ಈ ಚಿತ್ರದ ಟೀಸರ್ ಆಗಸ್ಟ್ 25 ರಂದು ಬಿಡುಗಡೆಯಾಗಲಿದೆ.

 

ಪವನ್ ಶಂಕರ್ ಹಾಗೂ ಸಹನ ಸುಧಾಕರ್ ನಾಯಕ, ನಾಯಕಿಯಾಗಿ ನಟಿಸಿರುವ ಈ ಚಿತ್ರದ ಪ್ರಮುಖಪಾತ್ರದಲ್ಲಿ ದತ್ತಣ್ಣ, ಬಾಲ ರಾಜವಾಡಿ ಹಾಗೂ ಗೋಪಾಲಕೃಷ್ಣ ದೇಶಪಾಂಡೆ ಅಭಿನಯಿಸಿದ್ದಾರೆ. ಎಂಭತ್ತರ ಹರಯದಲ್ಲೂ ಯುವಕರು ನಾಚುವಂತಹ ದತ್ತಣ್ಣ ಈ ಚಿತ್ರದಲ್ಲಿ ನ್ಯಾಯಾಧೀಶರಾಗಿ ಅಭಿನಯಿಸಿದ್ದಾರೆ. ಗೋಪಾಲಕೃಷ್ಣ ದೇಶಪಾಂಡೆ ಅವರು ವಕೀಲರಾಗಿ ಹಾಗೂ ಬಾಲ ರಾಜವಾಡಿ ಅವರು ಗೃಹ ಸಚಿವರಾಗಿ ಕಾಣಿಸಿಕೊಂಡಿದ್ದಾರೆ. ಮೂವರ ಅಭಿನಯವೂ ಮನೋಜ್ಞವಾಗಿ ಮೂಡಿಬಂದಿದೆ ಎನ್ನುತ್ತಾರೆ ನಿರ್ದೇಶಕರು.

 

ನಿರ್ದೇಶಕ ಗೌತಮ್ ಬಸವರಾಜ್ ಅವರು ಸೇರಿದಂತೆ ಈ ಚಿತ್ರದಲ್ಲಿ ನಟಿಸಿರುವ ಬಹುತೇಕ ತಂತ್ರಜ್ಞರು ಹೈದರಾಬಾದ್ ನ ಅನ್ನಪೂರ್ಣ ಸ್ಟುಡಿಯೋಸ್ ನಲ್ಲಿ ಮೂರುವರ್ಷಗಳ‌ ಕಾಲ ಫಿಲಂ ಮೇಕಿಂಗ್ ಕೋರ್ಸ್ ಮುಗಿಸಿ ಈ ಮಾಡಿರುವುದು ವಿಶೇಷ.

Macht entertainments ಲಾಂಛನದಲ್ಲಿ ಸುಜಾತ ಕುಮಾರಿ ಹಾಗೂ ಅನಿಲ್ ಕುಮಾರ್ ಬಿ.ಎನ್ ನಿರ್ಮಾಣ ಮಾಡಿರುವ ಈ ಚಿತ್ರಕ್ಕೆ ಹರ್ಷ್ ಮಿಶ್ರ ಛಾಯಾಗ್ರಹಣ, ಹರೀಶ್ ಚೌಧರಿ ಸಂಕಲನ, ಕುಂಗ್ಫು ಚಂದ್ರು ಸಾಹಸ ನಿರ್ದೇಶನ, ಸುಚಿತ್ ಚವ್ಹಾಣ್, ನೃತ್ಯ ನಿರ್ದೇಶನ , ಸ್ಮಿತ ಕುಲಕರ್ಣಿ ಕಲಾ ನಿರ್ದೇಶನ ಹಾಗೂ ನಿರ್ಮಾಲ್ ಜೋಶಿ ಅವರ ಸಹ ನಿರ್ದೇಶನವಿದೆ. ಉತ್ಸವ್ ಶ್ರೇಯಸ್ ಸಂಗೀತ ನೀಡಿರುವ ಈ ಚಿತ್ರದಲ್ಲಿ ನಾಲ್ಕು ಹಾಡುಗಳಿದ್ದು, ಸುರೇಶ್ ರೆಡ್ಡಿ ಹಾಗೂ ಅಭಿಷೇಕ್ ಅಕ್ಕಣ್ಣನವರ್ ಹಾಡುಗಳನ್ನು ಬರೆದಿದ್ದಾರೆ.

ಹಿರಿಯ ನಟ ರಾಕ್ ಲೈನ್ ಸುಧಾಕರ್ ಅವರ ಪುತ್ರ ಗೌತಮ್ ಸುಧಾಕರ್ ಈ ಚಿತ್ರದ ಪ್ರಮುಖಪಾತ್ರದಲ್ಲಿ ನಟಿಸಿದ್ದಾರೆ. ಮಾಸ್ಟರ್ ಶಮಂತ್, ನೀನಾಸಂ ಆನಂದ್, ಉಮಾ ಹೆಬ್ಬಾರ್ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.

Spread the love
Continue Reading
Click to comment

Leave a Reply

Your email address will not be published. Required fields are marked *